Connect with us

Hi, what are you looking for?

Diksoochi News

ಸಿನಿಮಾ

ತಡರಾತ್ರಿ ಪಾರ್ಟಿ ಪ್ರಕರಣ: ವಿಚಾರಣೆಗೆ ಹಾಜರಾದ ನಟ ದರ್ಶನ್

0

ಬೆಂಗಳೂರು : ತಡರಾತ್ರಿ ಪಬ್‌ನಲ್ಲಿ ಪಾರ್ಟಿ ಮಾಡಿದ ಹಿನ್ನೆಲೆ ನಟ ದರ್ಶನ್ ಸೇರಿದಂತೆ ಹಲವರಿಗೆ ನೋಟಿಸ್ ನೀಡಿ, ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಹೀಗಾಗಿ ನಟ ದರ್ಶನ್ , ಹಾಗೂ ಇತರರು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ವಿಚಾರಣಾಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗಿದ್ದಾರೆ.

ಜೆಟ್ ಲ್ಯಾಬ್ ನಲ್ಲಿ ಕಾಟೇರ ಸಕ್ಸಸ್ ಪಾರ್ಟಿ ಆಯೋಜಿಸಲಾಗಿತ್ತು. ತಡರಾತ್ರಿ ವರೆಗೂ ಪಾರ್ಟಿ ನಡೆದಿತ್ತು ಎನ್ನಲಾಗಿತ್ತು. ಈ ಸಂಬಂಧ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ನಟ ದರ್ಶನ್, ನಿನಾಸಂ ಸತೀಶ್, ಅಭಿಷೇಕ್ ಅಂಬರೀಶ್ ಸೇರಿದಂತೆ ವಿವಿಧ ಸ್ಯಾಂಡಲ್ ವುಡ್ ನಟರಿಗೆ ನೋಟಿಸ್ ನೀಡಿದ್ದರು.

ಈ ನೋಟಿಸ್‌ಗೆ ಈಗಾಗಲೇ ಹಲವು ಸೆಲೆಬ್ರೆಟಿಗಳು ಪೊಲೀಸರ ಮುಂದೆ ವಿಚಾರಣೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದರು.

Advertisement. Scroll to continue reading.

ದುಬೈ ಪ್ರವಾಸದಲ್ಲಿದ್ದಂತ ನಟ ದರ್ಶನ್ ಮಾತ್ರ ಹಾಜರಾಗಿರಲಿಲ್ಲ. ಇದೀಗ ದುಬೈನಿಂದ ವಾಪಾಸ್ ಆಗಿರುವ ಹಿನ್ನಲೆಯಲ್ಲಿ ಅವರು ಕೂಡ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ ಆರ್ ಆರ್ ನಗರದ ತಮ್ಮ ನಿವಾಸದಿಂದ ತೆರಳಿದಂತ ಅವರು, ಸುಬ್ರಹ್ಮಣ್ಯ ನಗರ ಠಾಣೆಗೆ ತೆರಳಿ, ವಿಚಾರಣಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾದರು. ಈ ವೇಳೆ ರಾಕ್‌ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಶ್ ಕೂಡ ಇದ್ದರು. ದರ್ಶನ್‌ರನ್ನು ನೋಡಲು ಪೊಲೀಸ್ ಠಾಣೆ ಮುಂಭಾಗ ಅಭಿಮಾನಗಳ ದಂಡು ನೆರೆದಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುವಂತಾಯಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!