Connect with us

Hi, what are you looking for?

Diksoochi News

ಸಿನಿಮಾ

ನಟ ದರ್ಶನ್‌ನನ್ನು ಟಾರ್ಗೆಟ್ ಮಾಡ್ತಿದ್ದಾರೆ : ರಾಕ್‌ಲೈನ್ ವೆಂಕಟೇಶ್

0

ಬೆಂಗಳೂರು : ತಡರಾತ್ರಿ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಇತರೆ ನಟರು ಇಂದು ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಕ್‌ಲೈನ್ ವೆಂಕಟೇಶ್, ನಟ ದರ್ಶನ್ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದಿದ್ದಾರೆ.

ಹೀಗಾಗಿಯೇ ಇದನ್ನು ದೊಡ್ಡದು ಮಾಡಲಾಗುತ್ತಿದೆ. ನಾವು ತಡರಾತ್ರಿ ಪಾರ್ಟಿ ಮಾಡಲಿಲ್ಲ. ಊಟಕ್ಕೆ ಕುಳಿತಿದ್ದೆವು. ಅಡುಗೆ ಮಾಡೋದು ತಡವಾಗಿದ್ದರಿಂದ ತಡರಾತ್ರಿ ಆಗಿದೆ ಎಂದು ಹೇಳಿದ್ದಾರೆ.

ತಡರಾತ್ರಿ ಎಷ್ಟೋ ಬಾರ್ ಗಳು ಓಪನ್ ಇರುತ್ತವೆ. ಆದರೆ, ಈವರೆಗೂ ಯಾವುದೇ ಗ್ರಾಹಕನಿಗೆ ಈ ರೀತಿ ನೋಟಿಸ್ ಕೊಟ್ಟಿಲ್ಲ. ಸಾಮಾನ್ಯ ಜನರಿಗೂ, ಸೆಲೆಬ್ರಿಟಿಗಳಿಗೂ ಒಂದೇ ಕಾನೂನು. ನಮಗೆ ಅವತ್ತು ಯಾವ ಪೊಲೀಸರೂ ಕೇಳಿಲ್ಲ. ಯಾರಿಗೂ ತೊಂದರೆ ಆಗುವಂತೆ ನಡೆದುಕೊಂಡಿಲ್ಲ ಎಂದಿದ್ದಾರೆ.

Advertisement. Scroll to continue reading.

ಕಾಟೇರ ಸಿನಿಮಾದ ಸೆಲೆಬ್ರಿಟಿ ಶೋ ಮುಗಿಯುತ್ತಿದ್ದಂತೆಯೇ ದರ್ಶನ್ ಅಂಡ್ ಟೀಮ್ ಸಕ್ಸಸ್ ಪಾರ್ಟಿಯನ್ನು ಆಯೋಜನೆ ಮಾಡಿತ್ತು. ಚಿಕ್ಕಣ್ಣ, ಡಾಲಿ ಧನಂಜಯ್ಯ,  ನೀನಾಸಂ ಸತೀಶ್, ಅಭಿಷೇಕ್ ಅಂಬರೀಶ್, ನಿರ್ದೇಶಕ ತರುಣ್ ಸುಧೀರ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ತಡರಾತ್ರಿ ವರೆಗೆ ಪಾರ್ಟಿ ನಡೆದಿದೆ ಎಂಬ ಆರೋಪದ ಹಿನ್ನೆಲೆ ಇದಕ್ಕೆ ಸಂಬಂಧಿಸಿದಂತೆ ಸುಬ್ರಮಣ್ಯ ನಗರ ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ನಟರಿಗೆ ಮತ್ತು ನಿರ್ಮಾಪಕರಿಗೆ ನೋಟಿಸ್ ನೀಡಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!