Connect with us

Hi, what are you looking for?

ರಾಷ್ಟ್ರೀಯ

ಮದುವೆ ಸಮಾರಂಭದ ವೇಳೆ ದುರಂತ; ಸ್ಕಾರ್ಪಿಯೋ ಹರಿದು ನಾಲ್ವರು ಮಕ್ಕಳು ಸೇರಿ ಐವರ ದುರ್ಮರಣ!

2

ಪಲಾಮು : ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ಪಲಾಮು ಜಿಲ್ಲೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಮೃತ ಮಕ್ಕಳೆಲ್ಲರೂ ಶಾಲಾ ವಿದ್ಯಾರ್ಥಿಗಳಾಗಿದ್ದಾರೆ.

ನೌದಿಹಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಶುನಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

ಬಿಶುನಪುರದ ವಿವೇಕ್, ರಾಜಾ, ಫಿರೋಜ್, ನಿತೇಶ್ ಮೃತ ಮಕ್ಕಳು. ಮತ್ತೊಬ್ಬ ಗೌರವ್ ಕುಮಾರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾನೆ.

Advertisement. Scroll to continue reading.

ಇವರೆಲ್ಲರೂ ಇಲ್ಲಿನ ಅರವಿಂದ್ ಮಿಸ್ತ್ರಿ ಎಂಬುವವರ ಮಗನ ಮದುವೆ ಸಮಾರಂಭ ನಡೆಯುತ್ತಿತ್ತು. ಇದರಲ್ಲಿ ಇವರೆಲ್ಲೂ ಪಾಲ್ಗೊಂಡಿದ್ದರು ಎಂದು ಹೇಳಲಾಗಿದೆ.

ಅತಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ನಾಲ್ವರು ಮಕ್ಕಳು ಸೇರಿ ಐವರನ್ನು ಬಲಿ ಪಡೆದಿದೆ. ಚಾಲಕ ಕುಡಿದ ನಶೆಯಲ್ಲಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಸ್ಕಾರ್ಪಿಯೋ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಮದುವೆ ಸಮಾರಂಭದಲ್ಲಿ ಈ ಮಕ್ಕಳ ಪಾಲ್ಗೊಂಡಿದ್ದಾಗ ಅತಿ ವೇಗದಲ್ಲಿ ಬಂದ ಸ್ಕಾರ್ಪಿಯೋ ಕಾರು ಗುದ್ದಿದೆ. ಇದರ ಪರಿಣಾಮ ಕಾರಿನ ಚಕ್ರದ ಅಡಿಗೆ ಸಿಲುಕಿ ನಾಲ್ವರು ಮಕ್ಕಳು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಕಾರ್ಪಿಯೋಗೆ ಸಿಲುಕಿ ಹಸು ಕೂಡ ಸಾವು : ಈ ಘಟನೆಯ ಎರಡು ಕಿಲೋಮೀಟರ್ ಮೊದಲು ಸ್ಕಾರ್ಪಿಯೋ ಚಾಲಕ ಹಸು ಮೇಲೆ ಕೂಡ ಚಲಾಯಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆಯಲ್ಲಿ ಹಸು ಸಾವನ್ನಪ್ಪಿದೆ. ಹಸುವನ್ನು ಕೊಂದ ನಂತರ ಸ್ಕಾರ್ಪಿಯೋ ಚಾಲಕ ಬಿಶುನ್‌ಪುರದ ಕಡೆಗೆ ಅತಿವೇಗದಲ್ಲಿ ಬರುತ್ತಿದ್ದ. ಇದೇ ವೇಳೆ ಮಕ್ಕಳು ಮೇಲೆ ಸ್ಕಾರ್ಪಿಯೋ ಹರಿಸಿದ್ದಾನೆ ಎಂದು ಹೇಳಲಾಗಿದೆ.

Advertisement. Scroll to continue reading.

ಭೀಕರ ಅಪಘಾತದಲ್ಲಿ ಐವರು ಒಟ್ಟಿಗೆ ಸಾವನ್ನಪ್ಪಿರುವ ವಿಷಯ ತಿಳಿದು ಗ್ರಾಮಸ್ಥರು ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮತ್ತೊಂದೆಡೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.

ಗಾಯಾಳುವನ್ನು ಗೌರವ್ ಕುಮಾರ್‌ನನ್ನು ಚಿಕಿತ್ಸೆಗಾಗಿ ಎಂಎಂಸಿಎಚ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಪಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ನೌದಿಹಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!