Connect with us

Hi, what are you looking for?

Diksoochi News

ರಾಜ್ಯ

ಹಸೆಮಣೆ ಏರಬೇಕಿದ್ದ ಯುವತಿ ನೇಣಿಗೆ ಶರಣು!

0

ತೀರ್ಥಹಳ್ಳಿ : ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕು ಕಟ್ಲೆ ಹಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ.

ಚೈತ್ರಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಫೆಬ್ರುವಾರಿ 4 ರಂದು ಹಸೆಮಣೆ ಏರಬೇಕಾಗಿತ್ತು. ಆದರೆ, ಯಾವ ಕಾರಣಕ್ಕೆ ಯುವತಿ ನೇಣಿಗೆ ಶರಣಾಗಿದ್ದಾಳೆ ಎಂಬುದು ತಿಳಿದುಬಂದಿಲ್ಲ.

Advertisement. Scroll to continue reading.

ಮದುವೆಗೆ ಕೇವಲ 13 ದಿನಗಳಲ್ಲ ಯುವತಿ ಚೈತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ಇದುವರೆಗೂ ತಿಳಿದು ಬಂದಿಲ್ಲ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಯುವತಿ ನೇಣಿಗೆ ಶರಣಾಗಿದ್ದಾಳೆ.

ಎಂಕಾಂ ಪದವಿ ಪಡೆದಿದ್ದ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ನನಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ನನಗೆ ಮದುವೆ ಬೇಡವೆಂದು ವಿರೋಧ ಮಾಡುತ್ತಿದ್ದಳು ಎಂದು ವರದಿಯಾಗಿದೆ. ಆದರೆ ಮನೆಯವರು ಮನವೊಲಿಸಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ತೀರ್ಥಹಳ್ಳಿ ತಾಲೂಕಿನ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!