ಅಯೋಧ್ಯೆ : ಶತಮಾನದ ರಾಮಮಂದಿರದ ಕನಸು ಇಂದು ಸಾಕಾರಗೊಂಡಿದೆ. ಪ್ರಧಾನಿ ಮೋದಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ್ದಾರೆ.
ಬಳಿಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ರಾಮ ಬಂದಿದ್ದಾನೆ, ಇಂದಿನಿಂದ ಹೊಸ ಯುಗ ಆರಂಭವಾಗುತ್ತದೆ. ಶತಮಾನಗಳ ಕಾಯುವಿಕೆ, ತಾಳ್ಮೆ ಮತ್ತು ತ್ಯಾಗದ ನಂತರ ರಾಮ ಇಂದು ಬಂದಿದ್ದಾನೆ ಎಂದು ಹೇಳಿದ್ದಾರೆ.
ಈ ಶುಭ ಸಂದರ್ಭದಲ್ಲಿ ನಾನು ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಹೇಳಲು ತುಂಬಾ ವಿಷಯಗಳಿವೆ. ಆದ್ರೆ ಸಂತಸದಿಂದ ನನಗೆ ಮಾತೇ ಬರುತ್ತಿಲ್ಲ. ಇನ್ಮುಂದೆ ನಮ್ಮ ರಾಮ ಟೆಂಟ್ನಲ್ಲಿ ವಾಸಿಸುವುದಿಲ್ಲ, ಅದ್ಧೂರಿ ದೇವಾಲಯದಲ್ಲಿ ವಿರಾಜಮಾನನಾಗಿರುತ್ತಾನೆ. ಈ ಸಮರ್ಪಣೆಯ ಕ್ಷಣವು ಭಗವಾನ್ ರಾಮನ ಆಶೀರ್ವಾದ ಎಂದರು.
Advertisement. Scroll to continue reading.
ಜನವರಿ 22 ಕ್ಯಾಲೆಂಡರ್ನಲ್ಲಿ ಬರುವ ದಿನಾಂಕವಲ್ಲ. ಇದು ಹೊಸ ಯುಗದ ಉದಯ ಎಂದ ಅವರು, ಜೊತೆಗೆ ಜನವರಿ 22ರಂದು ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ʻಶ್ರೀರಾಮಜ್ಯೋತಿʼ ಬೆಳಗಿಸುವಂತೆ ಕರೆ ನೀಡಿದರು.
In this article:ayodhya, Diksoochi news, Featured, modi speech, Narendra Modi, PM Modi, rama, ramamandir, seetha maathe, shrirama
Click to comment