ರಾಮನಗರ : ತನ್ನ ಮಗುವಿಗೆ ಲಕ್ಷ್ಮಣ ರೇಖೆ ಕೀಟನಾಶಕ ನೀಡಿ ತಾನೂ ಸೆವಿಸಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಹಾರೋಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದ್ದು, ತಾಯಿ ಚಿಕಿತ್ಸೆ ಚೇತರಿಸಿಕೊಂಡಿದ್ದಾರೆ.
ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಗೋದೂರಿನಲ್ಲಿ ಈ ಘಟನೆ ನಡೆದಿದೆ.
ದೀಕ್ಷಿತ್ ಮೃತ ಮಗು. ಪೂರ್ಣಿಮಾ ಆತ್ಮಹತ್ಯೆಗೆ ಯತ್ನಿಸಿದಾಕೆ.
ಗಂಡ-ಹೆಂಡತಿ ಜಗಳವಾಡಿಕೊಂಡಿದ್ದರು. ಇದರಿಂದ ಬೇಸತ್ತ ಪತ್ನಿ 3 ವರ್ಷದ ಮಗ ದೀಕ್ಷಿತ್ ಗೌಡಗೆ ಲಕ್ಷ್ಮಣ ರೇಖೆ ಕೀಟನಾಶಕ ಕುಡಿಸಿ, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದಂತ ತಾಯಿ-ಮಗನನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ತೀವ್ರ ವಾಂತಿ, ಬೇಧಿಯಿಂದ 3 ವರ್ಷದ ದೀಕ್ಷಿತ್ ಗೌಡ ಸಾವನ್ನಪ್ಪಿದ್ದು, ಚಿಕಿತ್ಸೆಯ ಬಳಿಕ ತಾಯಿ ಪೂರ್ಣಿಮಾ ಚೇತರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಈ ಘಟನೆಯ ಸಂಬಂಧ ಪೂರ್ಣಿಮಾ ವಿರುದ್ಧ ಪತಿ ಸೋಮಶೇಖರ್ ಹಾರೋಹಳ್ಳಿ ಠಾಣೆಗೆ ದೂರು ನೀಡಿದರೆ,
ಪತಿಯ ವಿರುದ್ಧ ಪೂರ್ಣಿಮಾ ಪೋಷಕರು ದೂರು ನೀಡಿದ್ದಾರೆ. ಈಗ ದೂರು, ಪ್ರತಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.