Connect with us

Hi, what are you looking for?

Diksoochi News

Uncategorized

ಸಾಲಿಗ್ರಾಮ – ಭಿಕ್ಷಾಟನೆ ಮಾಡಿ 1ಲಕ್ಷ ರೂ ಸಾಲಿಗ್ರಾಮ ದೇವಳಕ್ಕೆ ನೀಡಿದ ಅಜ್ಜಿ ಶಬರಿಮಲೆ ಯಾತ್ರೆಗೆ

1


ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ ಅನ್ನದಾನ ಪೂರೈಸಿ ಶಬರಿಮಲೆ ಯಾತ್ರೆ ಹೊರಟಿದ್ದಾರೆ.
ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಅಧ್ಯಕ್ಷ ಕೆ.ಅನಂತಪದ್ಮನಾಭ ಐತಾಳ್ ಹಾಗೂ ಮಯ್ಯ ಟೀಫಿನ್ ಮಾಲಿಕ ರಾಫವೇಂದ್ರ ಮಯ್ಯ ಸಮ್ಮುಖದಲ್ಲಿ ಅಶ್ವಥಮ್ಮ ಇರುಮುಡಿ ಕಟ್ಟುವ ಕಾರ್ಯ ನಡೆಸಿದರು.
ಕಳೆದ 26 ವರ್ಷಗಳಿಂದ ವಿವಿಧ ಕ್ಷೇತ್ರಗಳಿಗೆ ದಾನಗೈದು ಶಬರಿಮಲೆ ಯಾತ್ರೆ ಕೈಗೊಂಡಿದ್ದು ಅದರಂತೆ ತಾನು ಭಿಕ್ಷಾಟನೆ ಮಾಡಿ ಸಂಗ್ರಹಿಸಿದ ಹಣವನ್ನು ಉಡುಪಿ, ದಕ್ಷಿಣಕನ್ನಡ ಸೇರಿದಂತೆ ಹೊರರಾಜ್ಯ ಕೇರಳದ ಅಯ್ಯಪ್ಪನ ಸನ್ನಿಧಾನಕ್ಕೂ ಲಕ್ಷರೂ ನೀಡಿ ಮನೆಮಾತಾಗಿರುವ ಅಶ್ವಥಮ್ಮ ಇದೀಗ ಈ ಬಾರಿ ಸಾಲಿಗ್ರಾಮ ಕ್ಷೇತ್ರದಿಂದ ಯಾತ್ರೆಗೆ ಹೊರಟಿರುವುದು ವಿಶೇಷತೆಯಾಗಿದೆ.

ಅಜ್ಜಿಯ ಪಾದಕ್ಕೆರಗಿ ಆಶೀರ್ವಾದ ಪಡೆದರು :

ಅಶ್ವಥಮ್ಮ ಶಬರಿಮಲೆ ಹೊರಡುವ ವಿಚಾರ ಗಮನಿಸಿದ ಸ್ಥಳೀಯ ಅಯ್ಯಪ್ಪ ಭಕ್ತಾಧಿಗಳು,ಇನ್ನಿತರರು ಅಜ್ಜಿಯ ಪಾದಕ್ಕೆರಗಿ ಆಶೀರ್ವಾದ ಪಡೆದು ಅಜ್ಜಿಯ ಹರಕೆಯಂತೆ ಶ್ರೀ ಕ್ಷೇತ್ರ ಅನ್ನದಾನದಲ್ಲಿ ಪಾಲ್ಗೊಂಡು ಸಂತುಷ್ಟರಾದರು.

ಕಳೆದ ಹಲವು ವರ್ಷಗಳಿಂದ ಶ್ರೀ ದೇವಳದ ಎದುರುಗಡೆ ಭಿಕ್ಷಾಟನೆ ಮಾಡುವ ಅಶ್ವಥಮ್ಮನಿಗೆ ಭದ್ರತೆಯ ದೃಷ್ಠಿಯಿಂದ ಶ್ರೀಕ್ಷೇತ್ರದ ಸ್ಥಳದಲ್ಲಿ ಇರಲು ವ್ಯವಸ್ಥೆ ಕಲ್ಪಿಸಲಾಗಿದೆ.

Advertisement. Scroll to continue reading.

ವರದಿ : ದಿನೇಶ್ ರಾಯಪ್ಪನಮಠ

Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ಕ್ಕೆ ತೆರೆಬಿದ್ದಿದೆ. ದೆಹಲಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಟೂರ್ನಿ ಅಭೂತಪೂರ್ವ...

ರಾಷ್ಟ್ರೀಯ

0 ಶ್ರೀನಗರ: ಈ ಹಿಂದೆಲ್ಲಾ ಕಲ್ಲೆಸೆತಕ್ಕೆ ಸುದ್ದಿಯಾಗುತ್ತಿದ್ದ ಕಾಶ್ಮೀರ ಈಗ ಬದಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಅಲ್ಲಿ ಫಾರ್ಮುಲಾ-4 ಕಾರ್‌ ರೇಸ್‌ ನಡೆದಿದೆ. ಶ್ರೀನಗರದ ವಿಶ್ವಪ್ರಸಿದ್ಧ ದಾಲ್ ಸರೋವರದ ದಡದಲ್ಲಿ ಭಾನುವಾರದಂದು ಮೊದಲ ಬಾರಿಗೆ...

ರಾಜ್ಯ

1 ಬೆಂಗಳೂರು: ರಾಜ್ಯದಲ್ಲಿ ಮುಂದಿನ 2-3 ದಿನಗಳಲ್ಲಿ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್ ಮತ್ತು ಕಲಬುರಗಿಯಲ್ಲಿ ಭಾನುವಾರ ತುಂತುರು ಮಳೆಯಾಗಿದ್ದು, ಇನ್ನೆರಡು ಮೂರು ದಿನಗಳಲ್ಲಿ ದಕ್ಷಿಣ ಒಳನಾಡು...

ಕರಾವಳಿ

1 ಮಂಗಳೂರು: ಮಲೆನಾಡು ಮತ್ತು ಕರಾವಳಿಯಲ್ಲಿ ಭಾಗದಲ್ಲಿ ನಕ್ಸಲರ ಚುಟುವಟಿಕೆ ಮತ್ತೆ ಶುರುವಾಗಿದೆ. ಐದು ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲರು ಮತ್ತೆ ಕಾಣಿಸಿಕೊಂಡಿದ್ದಾರೆ. ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ...

ಅಂತಾರಾಷ್ಟ್ರೀಯ

0 ಮಾಸ್ಕೋ: ರಷ್ಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾದಿಮಿರ್‌ ಪುಟಿನ್‌ ಭರ್ಜರಿ ಶೇ.87ರಷ್ಟು ಮತಗಳಿಸುವ ಮೂಲಕ ಸತತ ಗೆಲುವು ಸಾಧಿಸಿದ್ದು, ರಷ್ಯಾದ ಇತಿಹಾಸದಲ್ಲೇ ದೀರ್ಘಕಾಲ ಅಧ್ಯಕ್ಷಗಾದಿ ಏರಿದ ಹೆಗ್ಗಳಿಕೆಗೆ ಪುಟಿನ್‌ ಪಾತ್ರರಾಗಿದ್ದಾರೆ. ಕಮ್ಯೂನಿಸ್ಟ್ ಪಾರ್ಟಿ ಆಫ್...

error: Content is protected !!