Connect with us

Hi, what are you looking for?

ರಾಷ್ಟ್ರೀಯ

ಶಿವಸಂವಾದ ಯಾತ್ರೆ ವೇಳೆ ಆದಿತ್ಯ ಠಾಕ್ರೆ ಕಾರಿನ ಮೇಲೆ ಕಲ್ಲು ತೂರಾಟ

1

ಮುಂಬೈ : ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಶಿವಸೇನೆ ನಾಯಕ ಅಂಬಾದಾಸ್ ದಾನ್ವೆ ಬುಧವಾರ ಹೇಳಿದ್ದಾರೆ.

ವೈಜಾಪುರದ ಮಹಲ್‌ಗಾಂವ್‌ನಲ್ಲಿ ಆದಿತ್ಯ ಠಾಕ್ರೆ ಶಿವಸಂವಾದ ಯಾತ್ರೆಯನ್ನು ನಡೆಸುತ್ತಿತ್ತು. ಅದೇ ಸಮಯದಲ್ಲಿ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನದ ಮೆರವಣಿಗೆಯೂ ಪ್ರಾರಂಭವಾಯಿತು.

ಈ ವೇಳೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.

Advertisement. Scroll to continue reading.

ಮೆರವಣಿಗೆ ನಡೆಸುತ್ತಿದ್ದವರು ಮತ್ತು ಶಿವಸೇನೆ ಬೆಂಗಾವಲು ಪಡೆಯ ನಡುವೆ ಬಿರುಕು ಮೂಡಿಸಲು ಸಮಾಜವಿರೋಧಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮಹಾರಾಷ್ಟ್ರ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅಂಬಾದಾಸ್ ದಾನ್ವೆ ಆರೋಪಿಸಿದ್ದಾರೆ.

ಡಿಜೆ ಮತ್ತು ಮೆರವಣಿಗೆಯನ್ನು ನಿಲ್ಲಿಸುವಂತೆ ಪೊಲೀಸರು ಹೇಳಿದಾಗ, ಜನರು ಕೋಪಗೊಂಡು ಬೆಂಗಾವಲು ಪಡೆಯ ಮೇಲೆ ಕಲ್ಲು ತೂರಾಟ ನಡೆಸಿದರು ಎಂದು ದಾನ್ವೆ ಹೇಳಿದ್ದಾರೆ.

ಪರಿಸ್ಥಿತಿಯನ್ನು ನೋಡಿದ ಆದಿತ್ಯ ಠಾಕ್ರೆ ವೇದಿಕೆಯಿಂದ ಕೆಳಗಿಳಿದು ಭಾಷಣ ಮಾಡಿದರು. ಅವರು ನೆರೆದಿದ್ದ ಜನರಲ್ಲಿ ಅನಾನುಕೂಲತೆಗಾಗಿ ಕ್ಷಮೆಯಾಚಿಸಿದರು ಎಂದು ತಿಳಿದುಬಂದಿದೆ.

ಅಲ್ಲದೇ ಡಿಜೆ ಮತ್ತು ಮೆರವಣಿಗೆಯನ್ನು ನಡೆಸಲು ಬಯಸಿದರೆ ಅವರು ಮುಂದುವರೆಸಬಹುದು ಎಂದು ಹೇಳಿದರು. ಬಳಿಕ ನೆರೆದಿದ್ದ ಜನಸಮೂಹ ಆದಿತ್ಯ ಠಾಕ್ರೆ ಅವರ ಕಾರನ್ನು ತಡೆಯಲು ಪ್ರಯತ್ನಿಸಿದರು. ಆದರೆ ಅದನ್ನು ಭದ್ರತಾ ಸಿಬ್ಬಂದಿ ಅವರನ್ನು ಸುರಕ್ಷಿತವಾಗಿ ಕರೆದೊಯ್ದಿದ್ದಾರೆ ಎಂದು ದಾನ್ವೆ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!