Connect with us

Hi, what are you looking for?

Diksoochi News

ಕ್ರೀಡೆ

ಕೊಹ್ಲಿ ಬಗ್ಗೆ ಸುಳ್ಳು ಮಾಹಿತಿ ನೀಡಿ ದೊಡ್ಡ ತಪ್ಪು ಮಾಡಿದ್ದೇನೆ : ಎಬಿಡಿ

0

ಜೋಹಾನ್ಸ್‌ ಬರ್ಗ್: ವಿರಾಟ್ ಕೊಹ್ಲಿ ಅವರ ವೈಯಕ್ತಿಕ

ವಿಚಾರದ ಬಗ್ಗೆ ಸುಳ್ಳು ಮಾಹಿತಿ ಹಂಚಿಕೊಳ್ಳುವ ಮೂಲಕ ದೊಡ್ಡ ತಪ್ಪು ಮಾಡಿದ್ದೇನೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌ ಹೇಳಿದ್ದಾರೆ.

Advertisement. Scroll to continue reading.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳನ್ನು ನೀಡಿ ಹಿಂದೆ ಸರಿದಿದ್ದರು. ವಿರಾಟ್ ವಿಶ್ರಾಂತಿಯ ಬಗ್ಗೆ ಹಲವು ಊಹಾಪೋಹಗಳು ಹುಟ್ಟಿಕೊಂಡಿದ್ದವು.

ಈ ಕುರಿತು ತಮ್ಮ ಯೂಟ್ಯೂಬ್‌ ಚಾನಲ್‌ನಲ್ಲಿ ಹೇಳಿಕೆ ನೀಡಿದ್ದ ಕೊಹ್ಲಿ ಸ್ನೇಹಿತ ವಿಲಿಯರ್ಸ್, ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹೇಳಿದ್ದರು. ಈ ಸುದ್ದಿ ಮಿಂಚಿನಂತೆ ಹಬ್ಬಿತ್ತು.

ಇದೀಗ ಈ ಕುರಿತು ಎಬಿಡಿ ಸ್ಪಷ್ಟನೆ ನೀಡಿದ್ದಾರೆ. ನಾನು ಯೂಟ್ಯೂಬ್ ಚಾನೆಲ್ ನಲ್ಲಿ ಹೇಳಿಕೊಂಡಂತೆ ಯಾರಿಗೇ ಆಗಲಿ ಕುಟುಂಬ ಮೊದಲು, ತಮ್ಮ ಕುಟುಂಬ ಸದಸ್ಯರೇ ಆದ್ಯತೆಯಾಗುತ್ತಾರೆ. ಆದರೆ ನಾನು ಈ ಹಿಂದೆ ಹೇಳಿಕೊಂಡ ವಿಷಯ ತಪ್ಪಾಗಿದೆ ಎಂದು ಹೇಳಲು ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಅಲ್ಲಿ ಏನು ನಡೆಯುತ್ತಿದೆಯೋ ಎಂದು ಯಾರಿಗೂ ಗೊತ್ತಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹಾರೈಸಬಲ್ಲೆ. ಈಗ ವಿಶ್ರಾಂತಿ ಪಡೆಯಲು ಕಾರಣ ಏನೇ ಇದ್ದರೂ ಮತ್ತಷ್ಟು ಬಲಿಷ್ಠರಾಗಿ ಅವರು ಹಿಂತಿರುಗಿ ಬರಲಿ ಎಂದು ಆಶಿಸುತ್ತೇನೆ. ಆರೋಗ್ಯವಂತರಾಗಿ ಹೆಚ್ಚು ತಾಜಾತನದಿಂದ ಕ್ರಿಕೆಟ್‌ ಜಗತ್ತಿನಲ್ಲಿ ಮತ್ತೆ ಛಾಪು ಮೂಡಿಸಲಿ ಎಂದು ಹಾರೈಸಿದ್ದಾರೆ.

Advertisement. Scroll to continue reading.

ಈ ಹಿಂದೆ ಎಬಿಡಿ, ವಿರಾಟ್ ಕೊಹ್ಲಿ ದಂಪತಿ ಎರಡನೇ ಮಗು ನಿರೀಕ್ಷೆಯಲ್ಲಿದ್ದಾರೆ. ಇದು ಕುಟುಂಬದ ಸಮಯ. ಅದಕ್ಕಾಗಿ ನೀವು ವಿರಾಟ್ ಅವರನ್ನು ನಿರ್ಣಯಿಸಲು ಸಾಧ್ಯವಿಲ್ಲ ಮತ್ತು ನಾವು ಅವನನ್ನು ಮಿಸ್ ಮಾಡಿಕೊಳ್ಳುತ್ತೇವೆ. ಆದರೆ ಅವರು ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಎರಡನೇ ಬಾರಿಗೆ ತಂದೆಯಾಗಲು ಸಾಧ್ಯವಾಗುವ ದೊಡ್ಡ ಆಶೀರ್ವಾದಕ್ಕಾಗಿ ನಾವು ಅವರಿಗೆ ಶುಭ ಹಾರೈಸುತ್ತೇವೆ ಮತ್ತು ಅನುಷ್ಕಾ ಅವರಿಗೂ ಆಲ್ ದಿ ಬೆಸ್ಟ್,” ಎಂದು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ಅಂತಾರಾಷ್ಟ್ರೀಯ

0 ವಾಷಿಂಗ್ಟನ್‌: ಕಾರ್ಗೋ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕಸ ಪ್ರಸಿದ್ಧ ಸೇತುವೆ ಮುರಿದು ಬಿದ್ದ ಘಟನೆ ನಡೆದಿದೆ. ಸೇತುವೆಗೆ ಕಾರ್ಗೋ ಹಡಗು ಬಂದು ಗುದ್ದುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

error: Content is protected !!