Connect with us

Hi, what are you looking for?

Diksoochi News

ರಾಜ್ಯ

ಮುಂದಿನ 2-3 ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

1

ಬೆಂಗಳೂರು: ರಾಜ್ಯದಲ್ಲಿ ಮುಂದಿನ 2-3 ದಿನಗಳಲ್ಲಿ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೀದರ್ ಮತ್ತು ಕಲಬುರಗಿಯಲ್ಲಿ ಭಾನುವಾರ ತುಂತುರು ಮಳೆಯಾಗಿದ್ದು, ಇನ್ನೆರಡು ಮೂರು ದಿನಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾತನಾಡಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದೆ. ಅಲ್ಲದೆ, ತಮಿಳುನಾಡಿನ ಬಳಿ ಕಾಣಿಸಿಕೊಂಡಿರುವ ಟ್ರಫ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಪರಿಣಾಮ ಕರ್ನಾಟಕದ ಮೇಲೂ ಬೀರಲಿದೆ ಎಂದು ಹೇಳಿದ್ದಾರೆ.

Advertisement. Scroll to continue reading.

ಮಾರ್ಚ್ 20 ಅಥವಾ 21 ರಿಂದ, ಎರಡರಿಂದ ಮೂರು ದಿನಗಳವರೆಗೆ ತುಂತುರು ಮಳೆ ಇರಲಿದೆ. ಆದರೆ, ಈ ಮಳೆ ಅಣೆಕಟ್ಟುಗಳನ್ನು ತುಂಬಲು ಅಥವಾ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುವುದಿಲ್ಲ. ಅಲ್ಪಸ್ವಲ್ಪ ಮಳೆ ಸ್ವಲ್ಪ ಸಮಯದವರೆಗೆ ತಾಪಮಾನವನ್ನು ತಗ್ಗಿಸಲು ಸಹಾಯ ಮಾಡುತ್ತದೆ. ಜನರು ಈ ನೀರನ್ನು ಮಳೆನೀರು ಕೊಯ್ಲು ಮಾಡಬೇಕು. ಇದರಿಂದ ಕುಡಿಯುವ ನೀರಿನ ಹೊರೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಏಪ್ರಿಲ್‌ನಲ್ಲಿ 36-40 ಮಿ.ಮೀ ಮತ್ತು ಮೇನಲ್ಲಿ 86 ಮಿ.ಮೀ ಮಳೆಯಾಗುವ ನಿರೀಕ್ಷೆಯಿದ್ದು, ಈ ವರ್ಷ ಉತ್ತಮ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈನಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದೇವೆ ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!