Connect with us

Hi, what are you looking for?

Diksoochi News

ಅರೆ ಹೌದಾ!

ಅಜ್ಜಿ – ಮೊಮ್ಮಗಳಿಗೆ ಫ್ರೀ, ಅವರ ಪಕ್ಷಿಗಳಿಗೆ 444 ರು. ಟಿಕೆಟ್‌!: ಇದು ಕೆಎಸ್‌ಆರ್ಟಿಸಿ ರೂಲ್ಸ್…!

0

ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್ ಹತ್ತು-ಇಪ್ಪತ್ತು ರುಪಾಯಿಯಲ್ಲ ಸುಮಾರು 500 ರುಪಾಯಿ..!

ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಶಕ್ತಿ ಯೋಜನೆಯ ಫ್ರೀ ಟಿಕೆಟ್‌ ಕೊಟ್ಟಿದ್ದು, ಅವರು ತೆಗೆದುಕೊಂಡು ಹೋಗುತ್ತಿದ್ದ ನಾಲ್ಕು ಪಕ್ಷಿಗಳಿಗೆ 444 ರೂ. ಮೌಲ್ಯದ ಟಿಕೆಟ್‌ ಅನ್ನು ಕಂಡಕ್ಟರ್‌ ಕೊಟ್ಟಿದ್ದಾರೆ. ಮಹಿಳೆ ಯಾಕೆ ಎಂದು ಕೇಳಿದರು ಕೂಡ ಟಿಕೆಟ್‌ ಕೊಟ್ಟಿದ್ದರಿಂದ ಅನಿವಾರ್ಯವಾಗಿ ದುಡ್ಡು ಕೊಟ್ಟು ಅಜ್ಜಿ – ಮೊಮ್ಮಗಳು ಬಸ್‌ನಲ್ಲಿ ಪ್ರಯಾಣ ಮುಂದುವರಿಸಿದ್ದಾರೆ.

ಮಾರ್ಚ್‌ 27ರಂದು ಬೆಳಗ್ಗೆ 8 ಗಂಟೆಗೆ ಅಜ್ಜಿ – ಮೊಮ್ಮಗಳು ಬೆಂಗಳೂರಿನಿಂದ ಮೈಸೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಅವರು 4 ಲವ್‌ ಬರ್ಡ್ಸ್‌ಗಳನ್ನು ಪಂಜರದಲ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಂಡಕ್ಟರ್‌ ಅಜ್ಜಿ – ಮೊಮ್ಮಗಳಿಗೆ ಶಕ್ತಿ ಯೋಜನೆಯಡಿ ಝೀರೋ ಟಿಕೆಟ್‌ ಕೊಟ್ಟಿದ್ದಾರೆ. ಆದರೆ, ನಾಲ್ಕು ಲವ್‌ ಬರ್ಡ್ಸ್‌ಗಳಿಗೆ ತಲಾ ಒಂದಕ್ಕೆ 111 ರೂ. ನಂತೆ ಒಟ್ಟು 444 ರೂ. ಟಿಕೆಟ್‌ ನೀಡಿದ್ದಾನೆ. ಪಕ್ಷಿಗಳನ್ನು ಮಕ್ಕಳಂತೆ ಪರಿಗಣಿಸಿ ಅರ್ಧ ಟಿಕೆಟ್‌ ಅನ್ನು ನಿರ್ವಾಹಕ ನೀಡಿದ್ದಾನೆ.

Advertisement. Scroll to continue reading.

ಇನ್ನು, ಈ ಹಿಂದೆ ಕೋಳಿಗೆ ಟಿಕೆಟ್‌ ತೆಗೆದುಕೊಳ್ಳುವ ವಿಚಾರಕ್ಕೂ ಕೂಡ ಅನೇಕ ಕಡೆ ಬಸ್‌ ಕಂಡಕ್ಟರ್‌ ಹಾಗೂ ಜನರ ನಡುವೆ ಗಲಾಟೆಗಳಾಗಿವೆ. ಪ್ರಾಣಿ – ಪಕ್ಷಿಗಳಿಗೆ ಟಿಕೆಟ್‌ ನೀಡದ ನಿರ್ವಾಹಕರು ಪರಿಶೀಲನೆ ವೇಳೆ ಸಿಕ್ಕಾಕಿಕೊಂಡು ಅಮಾನತು ಆದ ಉದಾಹರಣೆಗಳು ಇವೆ.

ಕೆಎಸ್‌ಆರ್‌ಟಿಸಿ ನಿಯಮ ಏನು?

ಕೆಎಸ್‌ಆರ್‌ಟಿಸಿ ಪ್ರಕಾರ ಪ್ರಯಾಣಿಕರು ತಮ್ಮೊಂದಿಗೆ ಕರೆತರುವ ಯಾವುದೇ ಪ್ರಾಣಿ, ಪಕ್ಷಿ, ನಾಯಿಮರಿಗಳಿಗೆ ಅರ್ಧ ಟಿಕೆಟ್ ಅನ್ನು ಖರೀದಿ ಮಾಡಲೇಬೇಕು ಎಂಬ ನಿಯಮವಿದೆ. ಹಾಗೇನಾದರೂ ಟಿಕೆಟ್ ಖರೀದಿ ಮಾಡದೇ ಇದ್ದಲ್ಲಿ, ಪ್ರಯಾಣಿಕನಿಗೆ ಟಿಕೆಟ್ ಬೆಲೆಯ ಶೇ.10ರಷ್ಟು ದಂಡ ಹಾಗೂ ನಿರ್ವಾಹಕನಿಗೆ ಅಮಾನತು ಶಿಕ್ಷೆ ನೀಡಲಾಗುತ್ತದೆ. ಅದಲ್ಲದೇ ಕೆಎಸ್‌ಆರ್‌ಟಿಸಿಯ ಹಣ ದುರುಪಯೋಗಪಡಿಸಿಕೊಂಡ ಎಂದು ಕ್ರಿಮಿನಲ್‌ ಮೊಕದ್ದಮೆಯನ್ನು ಕೂಡ ನಿರ್ವಾಹಕನ ಮೇಲೆ ಹೂಡುವ ಅವಕಾಶವಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಜ್ಯೋತಿಷ್ಯ

0 ದಿನಾಂಕ : ೧೭-೦೫-೨೪, ವಾರ : ಶುಕ್ರವಾರ ನಿಮ್ಮ ಕೆಲಸವನ್ನು ಇತರರಿಗೆ ಬಿಟ್ಟುಕೊಡಬೇಡಿ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ನಿಮ್ಮನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

error: Content is protected !!