Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ನಾಳೆ ವರ್ಷದ ಮೊದಲ ಸೂರ್ಯ ಗ್ರಹಣ: ಎಲ್ಲಿ, ಯಾವಾಗ ಗೋಚರ? ಇಲ್ಲಿದೆ ಮಾಹಿತಿ

1

ನವದೆಹಲಿ: 2024 ವರ್ಷದ ಮೊದಲ ಸೂರ್ಯಗ್ರಹಣ ನಾಳೆ ಅಂದರೆ ಏಪ್ರಿಲ್ 8 ಸೋಮವಾರ ಸಂಭವಿಸುತ್ತಿದ್ದು, ಭಾರತದಲ್ಲಿ ಈ ಗ್ರಹಣ ಗೋಚರವಾಗುತ್ತಿಲ್ಲ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಚಂದ್ರನ ನೆರಳು ಪೂರ್ತಿಯಾಗಿ ಸೂರ್ಯನ ಮೇಲೆ ಬಿದ್ದಾಗ ಸಂಪೂರ್ಣ ಸೂರ್ಯಗ್ರಹಣ ಸಂಭವಿಸುತ್ತದೆ. ಇದರ ಪರಿಣಾಮವಾಗಿ ಸೂರ್ಯನ ಬೆಳಕು ಭೂಮಿಯ ಮೇಲೆ ಬೀಳುವುದನ್ನು ತಡೆಯುತ್ತದೆ. ಚಂದ್ರನ ನೆರಳು ಭೂಮಿಯ ಮೇಲ್ಮೈಯಲ್ಲಿ ವೇಗವಾಗಿ ಚಲಿಸುವಾಗ ಸೂರ್ಯಗ್ರಹಣ ಗೋಚರವಾಗುತ್ತದೆ. ಸೂರ್ಯನ ಹೊರ ಪದರ ಚಂದ್ರನ ಮೇಲೆ ಸುತ್ತುವರಿದು ಸುಂದರವಾದ ಪ್ರಭಾವಲಯದಂತೆ ಹೊಳೆಯುತ್ತದೆ. ಇದು ನಿರ್ದಿಷ್ಟ ಅವಧಿಯವರೆಗೆ ಮಾತ್ರ ಸಂಭವಿಸುತ್ತದೆ.

ಎಲ್ಲೆಲ್ಲಿ ಗ್ರಹಣ ಗೋಚರ?

Advertisement. Scroll to continue reading.

ಈ ಬಾರಿ ಸೂರ್ಯಗ್ರಹಣವು ಉತ್ತರ ಅಮೆರಿಕ ಖಂಡದಾದ್ಯಂತ ಕಾಣಿಸುತ್ತಿದ್ದು, ಮೆಕ್ಸಿಕೋ, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 11.07ರ ಸುಮಾರಿಗೆ ಸೂರ್ಯಗ್ರಹಣ ಪ್ರಾರಂಭವಾಗಲಿದೆ.

ಪೆಸಿಫಿಕ್ ಕರಾವಳಿಯ ಪ್ರದೇಶದ ಮೆಕ್ಸಿಕೋದಲ್ಲಿ ಮೊದಲು ಸೂರ್ಯಗ್ರಹಣ ಗೋಚರವಾಗಲಿದೆ. ಅಲ್ಲದೆ ಟೆಕ್ಸಾಸ್, ಒಕ್ಲಹೋಮ, ಅರ್ಕಾನ್ಸಾಸ್, ಮಿಸೌರಿ, ಇಲಿನಾಯ್ಸ್, ಕೆಂಟುಕಿ, ಇಂಡಿಯಾನಾ, ಓಹಿಯೋ, ಪೆನ್ಸಿಲ್ವೇನಿಯಾ, ನ್ಯೂಯಾರ್ಕ್, ವರ್ಮೊಂಟ್, ನ್ಯೂ ಹ್ಯಾಂಪ್‌ಶೈರ್ ಮತ್ತು ಮೈನೆ ಮೊದಲಾದ ರಾಜ್ಯಗಳಲ್ಲಿ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುವುದು.

ಟೆಕ್ಸಾಸ್‌ನಲ್ಲಿ ಆರಂಭವಾಗಿ ಮೆಕ್ಸಿಕೋ, ಯುಕಾಟಾನ್ ಪೆನಿನ್ಸುಲಾ, ಗ್ವಾಟೆಮಾಲಾ, ಹೊಂಡಾರುಸ್, ನಿಕರಾಗುವಾ, ಕೋಸ್ಟರಿಕಾದಲ್ಲಿ ಗೋಚರಿಸಿತ್ತು. ಪನಾಮ, ಮಧ್ಯ ಅಮೆರಿಕ, ಉತ್ತರ ಅಮೆರಿಕ, ಕೊಲಂಬಿಯಾ ಮತ್ತು ಬ್ರೆಜಿಲ್‌ನಲ್ಲೂ ಗೋಚರಿಸುವುದರ ಜತೆಗೆ ಅಲಾಸ್ಕಾ ಮತ್ತು ಅರ್ಜೆಂಟೀನಾದಲ್ಲೂ ಗ್ರಹಣ ಸಂಭವಿಸಿತ್ತು. ಹೀಗಾಗಿ ಈ ಭಾಗದಲ್ಲಿ ಮಾತ್ರ ಗ್ರಹಣ ಪರಿಣಾಮ ಉಂಟಾಗಿದೆ. ಭಾರತದಲ್ಲಿ ಇದರ ಪರಿಣಾಮ ಇರುವುದಿಲ್ಲ.

ಭಾರತದಲ್ಲಿ ಗೋಚರ ಇಲ್ಲ

Advertisement. Scroll to continue reading.

ಈ ಬಾರಿ ಸೂರ್ಯಗ್ರಹಣವು ಭಾರತದಲ್ಲಿ ಗೋಚರವಾಗುವುದಿಲ್ಲ. ಯಾಕೆಂದರೆ ಸೂರ್ಯಗ್ರಹಣ ಸಂಭವಿಸಿದಾಗ ಭಾರತದಲ್ಲಿ ಮಧ್ಯರಾತ್ರಿಯಾಗಿರುತ್ತದೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಜ್ಯೋತಿಷ್ಯ

0 ದಿನಾಂಕ : ೧೭-೦೫-೨೪, ವಾರ : ಶುಕ್ರವಾರ ನಿಮ್ಮ ಕೆಲಸವನ್ನು ಇತರರಿಗೆ ಬಿಟ್ಟುಕೊಡಬೇಡಿ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ನಿಮ್ಮನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

error: Content is protected !!