Connect with us

Hi, what are you looking for?

Diksoochi News

ರಾಜ್ಯ

5, 8, 9ನೇ ತರಗತಿ ಫಲಿತಾಂಶ ಅಸಿಂಧುಗೊಳಿಸಿದ ಸುಪ್ರೀಂ; ಮಕ್ಕಳ ಅಡ್ಮಿಷನ್ ಮಾಡೋಕಾಗದೇ ಪೋಷಕರಿಗೆ ಸಂಕಷ್ಟ

0

ಬೆಂಗಳೂರು: ರಾಜ್ಯದಲ್ಲಿ 2023-24ನೇ ಸಾಲಿನ 5,8, 9ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಲಾದ ಬೋರ್ಡ್‌ ಪರೀಕ್ಷೆಯನ್ನು ಫಲಿತಾಂಶವನ್ನು ಸುಪ್ರೀಂ ಕೋರ್ಟ್‌ ಅಸಿಂಧುವೆಂದು ಆದೇಶ ಹೊರಡಿಸಿದೆ. ಆದರೆ, ಫಲಿತಾಂಶ ಪ್ರಕಟಿಸಿದ ಶಿಕ್ಷಣೆ ಇಲಾಖೆ ಸಂಕಷ್ಟಕ್ಕೆ ಸಿಲುಕಿದೆ. ಈಗಾಗಲೇ ಸುಪ್ರೀಂ ಕೋರ್ಟ್ ಫಲಿತಾಂಶ ತಡೆಹಿಡಿದಿದ್ದರೂ, ಕೆಲವೊಂದು ಶಾಲೆಗಳು ಫಲಿತಾಂಶ ಪ್ರಕಟಿಸಿವೆ. ಆದರೆ, ಈಗ ಫಲಿತಾಂಶವೇ ಅಸಿಂಧುವೆಂದು ಕೋರ್ಟ್‌ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಕ್ಕಳನ್ನು ಮುಂದಿನ ತರಗತಿಗೆ ಯಾವ ಆಧಾರದಲ್ಲಿ ಅಡ್ಮಿಷನ್ ಮಾಡಬೇಕು ಎಂದು ಪೋಷಕರು ಕೂಡ ಸಂಕಷ್ಟ ಎದುರಿಸುತ್ತಿದ್ದಾರೆ.

ಹೌದು,  2023-24ನೇ ಸಾಲಿನ 5,8, 9ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಲಾದ ಬೋರ್ಡ್‌ ಪರೀಕ್ಷೆಯಿಂದ ವಿದ್ಯಾರ್ಥಿಗಳು, ಪೋಷಕರು, ಶಾಲೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಣ ಇಲಾಖೆಯೂ ಕೂಡ ಸಂಕಷ್ಟಕ್ಕೆ ಸಿಲುಕಿವೆ. ಬೋರ್ಡ್‌ ಪರೀಕ್ಷೆ ನಡೆಸಬೇಕಾ ಅಥವಾ ಬೇಡವಾ ಎಂಬ ಗೊಂದಲದ ನಡುವೆಯೇ ಸರ್ಕಾರದಿಂದ ಬೋರ್ಡ್‌ ಪರೀಕ್ಷೆ ನಡೆಸಿರುವುದೇ ಎಲ್ಲರೂ ಸಂಕಷ್ಟಕ್ಕೆ ಸಿಲುಕಲು ಕಾರಣವಾಗಿದೆ. ಮಕ್ಕಳು ಪ್ರತಿ ವರ್ಷದಂತೆ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಪರೀಕ್ಷೆ ಬರೆದು ಮುಂದಿನ ತರಗತಿಗೆ ಪ್ರವೇಶ ಪಡೆದು ಹೋಗುವವರಿದ್ದರು. ಆದರೆ, ಸರ್ಕಾರದ ನಿರ್ಧಾರ ಹಾಗೂ ಸುಪ್ರೀಂ ಕೋರ್ಟ್‌ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈಗಾಗಲೇ ಶಿಕ್ಷಣ ‌ಇಲಾಖೆ ರಾಜ್ಯಾದ್ಯಂತ  ಶಾಲೆಗಳಿಗೆ ಬೇಸಿಗೆ ರಜೆ ನೀಡಿದೆ. ಕೆಲ ಶಾಲೆಗಳು ಫಲಿತಾಂಶವನ್ನ ಪ್ರಕಟ ಮಾಡಿದೆ. ಪ್ರಕಟ ಮಾಡಿರುವ ಫಲಿತಾಂಶವನ್ನ ಕೋರ್ಟ್ ಅಸಿಂಧು ಅಂತ ಹೇಳಿದೆ. ಇದರಿಂದಾಗಿ ಶಿಕ್ಷಣ ಇಲಾಖೆಯು ಮುಂದಿನ ಶೈಕ್ಷಣಿಕ ವರ್ಷಕ್ಕೆ ಯಾವ ಅಂಕಗಳನ್ನು ಪರಿಗಣಿಸಬೇಕು ಅನ್ನೋ ಗೊಂದಲಕ್ಕೆ ಸಿಲುಕಿದೆ. ಮಕ್ಕಳ ಶಾಲಾ ಬದಲಾವಣೆಗೂ ಸಮಸ್ಯೆಯಾಗಿದೆ. ಇನ್ನು ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಬೇಕು ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ಕೊಡುವಂತೆ ಕೇಳಿದರೂ ಇದಕ್ಕೆ ಸಮಸ್ಯೆ ಆಗುತ್ತಿದೆ.

Advertisement. Scroll to continue reading.

ಈ ಬಗ್ಗೆ ಶಿಕ್ಷಣ ‌ಇಲಾಖೆ ಮಾತ್ರ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿರುವ ಬಗ್ಗೆ ‌ಮಾಹಿತಿ ನೀಡಿಲ್ಲ. ಪೋಷಕರು ‌ಕೂಡ ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳಿಗೆ ‌ಬೇಸಿಗೆ ರಜೆ  ಕೊಡಲಾಗಿದ್ದು, ಮತ್ತೊಂದೆಡೆ ಲೋಕಸಭಾ ಚುನಾವಣೆ ‌ನಡೆಯುತ್ತಿದೆ. ಹೀಗಾಗಿ ‌ಪರೀಕ್ಷೆ ಫಲಿತಾಂಶ ವಿಚಾರದಲ್ಲಿ ಗೊಂದಲ ಮಾಡಿಕೊಂಡಿರುವ ಶಿಕ್ಷಣ ‌ಇಲಾಖೆಯು ಗೊಂದಲಕ್ಕೆ ಸಿಲುಕಿದೆ. ಮಕ್ಕಳು ಒಂದು ಶಾಲೆಯಿಂದ ‌ಮತ್ತೊಂದು ಶಾಲೆಗೆ ಸೇರಲು ಟಿಸಿ ಸಹ ಕೊಡ್ತಿಲ್ಲ. ಹೀಗಾಗಿ ಮಕ್ಕಳ ಪ್ರೋಗ್ರೇಸ್ ಕಾರ್ಡ್ ರಿಪೋರ್ಟ್ ಸಿಗದೆ  ಪೋಷಕರ ಪರದಾಡುತ್ತಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಜ್ಯೋತಿಷ್ಯ

0 ದಿನಾಂಕ : ೧೭-೦೫-೨೪, ವಾರ : ಶುಕ್ರವಾರ ನಿಮ್ಮ ಕೆಲಸವನ್ನು ಇತರರಿಗೆ ಬಿಟ್ಟುಕೊಡಬೇಡಿ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ನಿಮ್ಮನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

error: Content is protected !!