Connect with us

Hi, what are you looking for?

Diksoochi News

ರಾಷ್ಟ್ರೀಯ

I.N.D.I.A ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ:ಮಿಸಾ ಭಾರತಿ

0

ಪಾಟ್ನಾ: I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಏಜೆನ್ಸಿಗಳ ದುರ್ಬಳಕೆ ಹಾಗೂ ಚುನಾವಣಾ ಬಾಂಡ್ ಮೂಲಕ ಅಕ್ರಮ ಹಣ ಸಂಗ್ರಹಿಸಿದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಜೈಲಿಗೆ ಹಾಕಲಾಗುತ್ತದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರ ಪುತ್ರಿ ಮಿಸಾ ಭಾರತಿ  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಾಟಲಿಪುತ್ರ ಕ್ಷೇತ್ರದ ಆರ್‌ಜೆಡಿ ಅಭ್ಯರ್ಥಿ ಮಿಸಾ ಭಾರತಿ ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪ್ರಧಾನಿ ಮೋದಿ ಬಿಹಾರಕ್ಕೆ ಬಂದಾಗಲೆಲ್ಲಾ ಅವರು ನಮ್ಮ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ಎಷ್ಟು ದೊಡ್ಡದು ಎಂದು ನಿಮಗೆ ತಿಳಿದಿದೆಯೇ? ಬಿಜೆಪಿಯು ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ನಿಜವಾಗಿಯೂ ಭ್ರಷ್ಟಾಚಾರ ಮಾಡಿದೆ. ಹಾಗಾಗಿ ದೇಶದ ಜನ ಇಂಡಿಯಾ ಮೈತ್ರಿ ಕೂಟಕ್ಕೆ ಅಧಿಕಾರದ ಅವಕಾಶ ಮಾಡಿಕೊಟ್ಟರೆ, ಪ್ರಧಾನಿಯಿಂದ ಹಿಡಿದು ಎಲ್ಲ ಬಿಜೆಪಿ ನಾಯಕರೂ ಜೈಲು ಪಾಲಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement. Scroll to continue reading.

ಜೆಪಿ ನಡ್ಡಾ ಕೌಂಟರ್‌ ಅಟ್ಯಾಕ್‌:
ಮಿಸಾ ಭಾರತಿ ಹೇಳಿಕೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಭ್ರಷ್ಟಾಚಾರದ ಆರೋಪದ ಮೇಲೆ ತನಿಖೆ ಎದುರಿಸುತ್ತಿರುವವರು ಮತ್ತು ಜಾಮೀನಿನ ಮೇಲೆ ಹೊರಗಿರುವವರು ಲಾಲು ಕುಟುಂಬದವರು. ಲಾಲು ಪ್ರಸಾದ್‌ ಹಾಗೂ ಮಿಸಾ ಭಾರತಿ ವಿವಿಧ ಹಗರಣದಲ್ಲಿ ಆಪಾದಿತರು. ಕಳಂಕರಹಿತ ರಾಜಕೀಯ ಜೀವನವನ್ನು ಹೊಂದಿರುವ ಮೋದಿ ಮೇಲೆ ಆರೋಪ ಮಾಡುವುದು ಖಂಡನಾರ್ಹ. ಇಂತಹವರಿಗೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಜನತೆಗೆ ಮನವಿ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಲಕ್ನೋ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಾಂಗ್ರೆಸ್‌ ನಾಯಕ ಹಾಗೂ ಕ್ಷೇತ್ರದ ಅಭ್ಯರ್ಥಿ ರಾಹುಲ್‌ ಗಾಂಧಿ ಭೇಟಿ ಬಳಿಕ ಕ್ಷೌರದ ಅಂಗಡಿಯ ಲಕ್‌ ಬದಲಾಗಿದೆ. ರಾಜಕೀಯ ಜನಪ್ರಿಯ ನಾಯಕನ ಭೇಟಿ ನಂತರ ಅಂಗಡಿಗೆ ಭೇಟಿ...

ಜ್ಯೋತಿಷ್ಯ

0 ದಿನಾಂಕ : ೧೭-೦೫-೨೪, ವಾರ : ಶುಕ್ರವಾರ ನಿಮ್ಮ ಕೆಲಸವನ್ನು ಇತರರಿಗೆ ಬಿಟ್ಟುಕೊಡಬೇಡಿ. ಮಾರ್ಕೆಟಿಂಗ್ ಸಂಬಂಧಿತ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಸಹೋದ್ಯೋಗಿಗಳು ನಿಮ್ಮನ್ನು ಚೆನ್ನಾಗಿ ನಡೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಕೆಲವು...

ಕರಾವಳಿ

0 ಉಡುಪಿ: ಗಾಂಧಿಯನ್ ಸೆಂಟರ್ ಫಾರ್ ಫಿಲೋಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್), ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡಕ ಸಹಯೋಗದಲ್ಲಿ ಮೇ 18ರಂದು ಉಡುಪಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎಂಬ ಬಗ್ಗೆ ವಿಚಾರ...

ರಾಜ್ಯ

0 ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮನೆಯೊಳಗೆ ನುಗ್ಗಿ ಮಲಗಿದ್ದಲ್ಲೇ ಯುವತಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು...

ಅರೆ ಹೌದಾ!

0 ತಿರುವನಂತಪುರಂ: ಆರು ಬೆರಳುಗಳಿರುವ ಮಗುವನ್ನು ಶಸ್ತ್ರಚಿಕಿತ್ಸೆಗೆಂದು ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿ ವೈದ್ಯರು ಎಡವಟ್ಟು ಮಾಡಿರುವ ಪ್ರಕರಣವೊಂದು ಕೇರಳದ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ...

error: Content is protected !!