Connect with us

Hi, what are you looking for?

Diksoochi News

ರಾಷ್ಟ್ರೀಯ

I.N.D.I.A ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ:ಮಿಸಾ ಭಾರತಿ

0

ಪಾಟ್ನಾ: I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಏಜೆನ್ಸಿಗಳ ದುರ್ಬಳಕೆ ಹಾಗೂ ಚುನಾವಣಾ ಬಾಂಡ್ ಮೂಲಕ ಅಕ್ರಮ ಹಣ ಸಂಗ್ರಹಿಸಿದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಜೈಲಿಗೆ ಹಾಕಲಾಗುತ್ತದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರ ಪುತ್ರಿ ಮಿಸಾ ಭಾರತಿ  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಾಟಲಿಪುತ್ರ ಕ್ಷೇತ್ರದ ಆರ್‌ಜೆಡಿ ಅಭ್ಯರ್ಥಿ ಮಿಸಾ ಭಾರತಿ ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪ್ರಧಾನಿ ಮೋದಿ ಬಿಹಾರಕ್ಕೆ ಬಂದಾಗಲೆಲ್ಲಾ ಅವರು ನಮ್ಮ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ಎಷ್ಟು ದೊಡ್ಡದು ಎಂದು ನಿಮಗೆ ತಿಳಿದಿದೆಯೇ? ಬಿಜೆಪಿಯು ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ನಿಜವಾಗಿಯೂ ಭ್ರಷ್ಟಾಚಾರ ಮಾಡಿದೆ. ಹಾಗಾಗಿ ದೇಶದ ಜನ ಇಂಡಿಯಾ ಮೈತ್ರಿ ಕೂಟಕ್ಕೆ ಅಧಿಕಾರದ ಅವಕಾಶ ಮಾಡಿಕೊಟ್ಟರೆ, ಪ್ರಧಾನಿಯಿಂದ ಹಿಡಿದು ಎಲ್ಲ ಬಿಜೆಪಿ ನಾಯಕರೂ ಜೈಲು ಪಾಲಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement. Scroll to continue reading.

ಜೆಪಿ ನಡ್ಡಾ ಕೌಂಟರ್‌ ಅಟ್ಯಾಕ್‌:
ಮಿಸಾ ಭಾರತಿ ಹೇಳಿಕೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಭ್ರಷ್ಟಾಚಾರದ ಆರೋಪದ ಮೇಲೆ ತನಿಖೆ ಎದುರಿಸುತ್ತಿರುವವರು ಮತ್ತು ಜಾಮೀನಿನ ಮೇಲೆ ಹೊರಗಿರುವವರು ಲಾಲು ಕುಟುಂಬದವರು. ಲಾಲು ಪ್ರಸಾದ್‌ ಹಾಗೂ ಮಿಸಾ ಭಾರತಿ ವಿವಿಧ ಹಗರಣದಲ್ಲಿ ಆಪಾದಿತರು. ಕಳಂಕರಹಿತ ರಾಜಕೀಯ ಜೀವನವನ್ನು ಹೊಂದಿರುವ ಮೋದಿ ಮೇಲೆ ಆರೋಪ ಮಾಡುವುದು ಖಂಡನಾರ್ಹ. ಇಂತಹವರಿಗೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಜನತೆಗೆ ಮನವಿ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!