Connect with us

Hi, what are you looking for?

Diksoochi News

ಸಿನಿಮಾ

ನಟಿ ಮಾನ್ವಿತಾ ಕಾಮತ್‌ಗೆ ಕೂಡಿಬಂದ ಕಂಕಣ ಭಾಗ್ಯ; ಹುಡುಗ ಯಾರು?

1

ನ್ನಡದ ಮತ್ತೋರ್ವ ನಟಿ ಹೊಸ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕೆಂಡ ಸಂಪಿಗೆ ಸಿನಿಮಾ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಮಾನ್ವಿತಾ ಕಾಮತ್ ಮೇ 1ರಂದು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಕುರಿತಾದ ಡಿಜಿಟೆಲ್ ಆಮಂತ್ರಣ ಪತ್ರಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಅಪ್ ಲೋಡ್ ಮಾಡಿದ್ದಾರೆ.

ಅಂದಹಾಗೆ, ಮಾನ್ವಿತಾರನ್ನು ಕೈಹಿಡಿಯುತ್ತಿರುವ ವರ ಯಾರು? ಅರುಣ್ ಕುಮಾರ್. ಹೌದು, ಮ್ಯೂಸಿಕ್ ಪ್ರೊಡ್ಯೂಸರ್ ಆಗಿರುವ ಅರುಣ್ ಕುಮಾರ್ ಅವರು ಮಾನ್ವಿತಾ ಜೊತೆಗೆ ಸಪ್ತಪದಿ ತುಳಿಯಲಿದ್ದಾರೆ.

ನಟಿ ಮಾನ್ವಿತಾ ಮತ್ತು ಅರುಣ್ ಕುಮಾರ್ ಅವರ ವಿವಾಹವು ಮೇ 1ರಂದು ಮಂಗಳೂರಿನಲ್ಲಿ ಜರುಗಲಿದೆ. ಹಳದಿ ಶಾಸ್ತ್ರವು ಏಪ್ರಿಲ್‌ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರವು ಏಪ್ರಿಲ್ 30ರಂದು ನಡೆಯಲಿದೆ. ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಮಾನ್ವಿತಾ ಮತ್ತು ಅರುಣ್ ದಾಂಪತ್ಯ ಬದುಕಿಗೆ ಕಾಲಿಡಲಿದ್ದಾರೆ.

ದಕ್ಷಿಣ ಕನ್ನಡದ ಮಾನ್ವಿತಾ ಮೊದಲು ಬಣ್ಣ ಹಚ್ಚಿದ್ದು ‘ದುನಿಯಾ’ ಸೂರಿ ಅವರ ‘ಕೆಂಡಸಂಪಿಗೆ’ ಚಿತ್ರಕ್ಕಾಗಿ. ಆನಂತರ ‘ಟಗರು’ ಸಿನಿಮಾದಿಂದ ಅವರ ಖ್ಯಾತಿ ಇನ್ನಷ್ಟು ಹೆಚ್ಚಿತು. ಇದರ ನಡುವೆ ‘ಕನಕ’, ‘ಚೌಕ’, ‘ತಾರಕಾಸುರ’, ‘ರಿಲ್ಯಾಕ್ಸ್ ಸತ್ಯ’, ‘ಇಂಡಿಯಾ ವರ್ಸಸ್‌ ಇಂಗ್ಲೆಂಡ್’, ‘ಶಿವ 143’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಾನ್ವಿತಾ ನಟನೆಯ ‘ಅಪ್ಪಾ ಐ ಲವ್ ಯೂ’ ಸಿನಿಮಾ (ಏ.12) ಇಂದು ತೆರೆಕಂಡಿದೆ. ‘ಬ್ಯಾಡ್’, ‘ರಾಜಸ್ಥಾನ್ ಡೈರೀಸ್’, ‘ಹ್ಯಾಪಿಲಿ ಮ್ಯಾರೀಡ್’ ಸಿನಿಮಾಗಳು ತೆರೆಗೆ ಬರಬೇಕಿವೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಆಂತರಿಕ ಭಿನ್ನಮತದ ಬೇಗೆಯನ್ನು ಎದುರಿಸುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಐಎಫ್ಎಫ್ ಸಿಒ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಭಿನ್ನಮತ ಸ್ಪಷ್ಟವಾಗಿ...

ಅರೆ ಹೌದಾ!

1 ಟೋಕಿಯೋ: ಕಾಲ ಆಧುನಿಕವಾಗುತ್ತಿದ್ದಂತೆ ಯುವಜನತೆಯ ಯೋಚನೆಯಲ್ಲೂ ಬಹು ಬದಾಲಾವಣೆ ಉಂಟಾಗುತ್ತಿದೆ. ಜತೆಗೆ ಕೌಟುಂಬಿಕ ಜೀವನ ಪದ್ಧತಿಯೂ ಬದಲಾಗುತ್ತಿದೆ. ಹಿಂದೆಲ್ಲ ಕುಟುಂಬ, ಮದುವೆ ಜೀವನದ ಅವಿಭಾಜ್ಯ ಅಂಗವಾಗಿತ್ತು. ಬಳಿಕ ಮದುವೆಯ ಸಾಂಪ್ರದಾಯಿಕ ವ್ಯವಸ್ಥೆಯನ್ನು...

ರಾಜ್ಯ

1 ಮಡಿಕೇರಿ: ಬಾಲಕಿಯ ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ...

ರಾಜ್ಯ

0 ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಎಸ್‌.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು...

ಜ್ಯೋತಿಷ್ಯ

0 ದಿನಾಂಕ : ೧೨-೦೫-೨೪, ವಾರ : ಭಾನುವಾರ ಹಣದ ಖರ್ಚು ಹೆಚ್ಚಿರಲಿದೆ. ಇದರಿಂದ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಹಣದ ವಿಚಾರಕ್ಕೆ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ....

error: Content is protected !!