Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಸಂಗಾತಿ ಜೊತೆಗೆ ಸ್ನಾನ ಮಾಡಿ ನೀರು ಉಳಿಸಿ: ಮೇಯರ್‌ ಸಲಹೆ

0

ಬೊಗೋಟಾ: ಈ ಬಾರಿ ಬೇಸಿಗೆಗೆ ಸಿಲಿಕಾನ್‌ ಸಿಟಿ ಬೆಂಗಳೂರು ಮಾತ್ರವಲ್ಲ ವಿಶ್ವದ ವಿವಿಧೆಡೆ ಮಹಾನಗರಗಳೂ ತೀವ್ರ ನೀರಿನ ಕೊರತೆ ಎದುರಿಸುತ್ತಿವೆ.

ಅದರಲ್ಲೂ ದಕ್ಷಿಣ ಅಮೆರಿಕದ ಬೊಗೋಟಾ ನಗರವಂತೂ ಗಂಭೀರ ಸ್ಥಿತಿಯಲ್ಲಿದೆ. ಜನರಿಗೆ ಆಶಾಕಿರಣದಂತಿದ್ದ ಜಲಾಶಯಗಳೇ ಬತ್ತಿಹೋಗುತ್ತಿವೆ. ಹಾಗಾಗಿ, ನೀರು ಮಿತವ್ಯಯಕ್ಕೆ ಅಲ್ಲಿನ ಮೇಯರ್, ಜನರಿಗೆ ವಿಚಿತ್ರ ಸಲಹೆಯೊಂದನ್ನ ನೀಡಿದ್ದಾರೆ. ಜನ ತಮ್ಮ ಸಂಗಾತಿಯೊಂದಿಗೆ ಒಟ್ಟಿಗೆ ಸ್ನಾನ ಮಾಡುವ ಮೂಲಕ ನೀರು ಉಳಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇತ್ತೀಚೆಗೆ ನಗರದ ಪ್ರಮುಖ ಪ್ರದೇಶಗಳಲ್ಲಿ ನೀರು ಪೂರೈಕೆ ತಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಬೊಗೋಟಾ ಮೇಯ‌ರ್ ಕಾರ್ಲೋಸ್ ಫರ್ನಾಂಡೊ ಗ್ಯಾಲನ್ ಅವರು, ಸಂಗಾತಿಯಾದವರು ಜೋಡಿಯಾಗಿ ಸ್ನಾನ ಮಾಡುವ ಮೂಲಕ ನೀರು ಮಿತವ್ಯಯ ಬಳಕೆಯ ಅಭ್ಯಾಸ ಮಾಡಿಕೊಳ್ಳಬೇಕು. ಈ ರೀತಿಯಾಗಿ ಮಾಡುವುದರಿಂದ ಸಾಕಷ್ಟು ಸಹಾಯಕವಾಗಲಿದೆ ಎಂದು ಅವರು ಹೇಳಿದ್ದಾರೆ.

Advertisement. Scroll to continue reading.

ಜೋಡಿಯಾಗಿ ಸ್ನಾನ ಮಾಡಿ ಎಂದು ಕರೆ ನೀಡಿರುವ ಮೇಯರ್, ಒಂದು ವೇಳೆ ರಜಾ ದಿನಗಳಲ್ಲಿ ಮನೆಯಲ್ಲೇ ಇರುವುದಾದರೆ ಅಂದು ಸ್ನಾನ ಮಾಡಬೇಡಿ ಎಂದೂ ಕರೆ ಕೊಟ್ಟಿದ್ದಾರೆ.

1980ರ ಬಳಿಕ ಬೊಗೋಟಾ ನಗರದಲ್ಲಿ ಅಪಾರ ಪ್ರಮಾಣದ ಜಲಕ್ಷಾಮ ಎದುರಾಗುತ್ತಿದೆ. ಜಲಾಶಯದ ಮಟ್ಟ ಸಹಜ ಪ್ರಮಾಣಕ್ಕಿಂತ 17 ಪ್ರತಿಶತದಷ್ಟು ಕಡಿಮೆಯಾಗಿದೆ. ಹಾಗಾಗಿ ನೀರಿನ ಮಿತ ಬಳಕೆಗೆ ಜನರು ಮುಂದಾಗಬೇಕು. ಜನರಿಗೆ ಕುಡಿಯುವ ನೀರನ್ನು ಪೂರೈಸಲು ಬೇಕಾಗ ಅಗತ್ಯ ಕ್ರಮಗಳನ್ನು ನಾವು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

0 ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಎಸ್‌.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು...

ಸಿನಿಮಾ

2 ಸದ್ಯ ಕಿರುತೆರೆಯಲ್ಲಿ ‘ಸೀತಾರಾಮ’ ಜನಪ್ರಿಯ ಧಾರಾವಾಹಿ. ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಈ ಧಾರಾವಾಹಿಗೆ ತನ್ನದೇ ಆದ ಅಭಿಮಾನಿ ಬಳಗವಿದೆ. ಅದರಲ್ಲೂ ಅಗ್ನಿಸಾಕ್ಷಿಯ ಸನ್ನಿಧಿ ಖ್ಯಾತಿಯ ವೈಷ್ಣವಿಗೌಡ ಈ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ್ದಾರೆ....

ಸಿನಿಮಾ

0 ಬೆಂಗಳೂರು: ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಚೇತನ್ ಚಂದ್ರ ಮೇಲೆ ಅಟ್ಯಾಕ್ ಮಾಡಲಾಗಿದೆ. ಸುಮಾರು 20 ಮಂದಿ ಅಟ್ಯಾಕ್ ಮಾಡಿದ್ದಾರೆ ಎಂದು...

ಜ್ಯೋತಿಷ್ಯ

0 ದಿನಾಂಕ : ೧೨-೦೫-೨೪, ವಾರ : ಭಾನುವಾರ ಹಣದ ಖರ್ಚು ಹೆಚ್ಚಿರಲಿದೆ. ಇದರಿಂದ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಹಣದ ವಿಚಾರಕ್ಕೆ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ....

ಜ್ಯೋತಿಷ್ಯ

0 ದಿನಾಂಕ: ೧೩-೦೫-೨೪, ವಾರ : ಸೋಮವಾರ, ನಕ್ಷತ್ರ : ಪುನರ್ವಸು, ತಿಥಿ: ಷಷ್ಠಿ ನೀವು ಪ್ರಮುಖ ಸಭೆಗೆ ಹಾಜರಾಗಬಹುದು. ಪ್ರೇಮ ಸಂಬಂಧಗಳಲ್ಲಿ ತೀವ್ರತೆ ಹೆಚ್ಚಾಗುವ ಸಾಧ್ಯತೆಗಳಿವೆ. ಕೆಲಸದ ಸ್ಥಳದಲ್ಲಿ ನೀವು ಸ್ನೇಹಿತರಿಂದ...

error: Content is protected !!