Connect with us

Hi, what are you looking for?

Diksoochi News

ರಾಜ್ಯ

ನನ್ನ ಮಗಳ ಕೊಲೆ ಪೂರ್ವನಿಯೋಜಿತ, ಫಯಾಜ್‌ ಕುಟುಂಬದ ಒಳಸಂಚು: ನೇಹಾ ತಂದೆ ನಿರಂಜನಯ್ಯ

0

ಹುಬ್ಬಳ್ಳಿ: ನನ್ನ ಮಗಳು ನೇಹಾ ಕೊಲೆಯು ಪೂರ್ವ ನಿಯೋಜಿತ ಎನ್ನಿಸುತ್ತಿದೆ. ಫಯಾಜ್‌ ಕುಟುಂಬದ ಕುಮ್ಮಕ್ಕು ಇದೆ. ಹೀಗಾಗಿ, ಕುಟುಂಬದ ವಿರುದ್ಧ ಪೊಲೀಸ್‌ ದೂರು ನೀಡುತ್ತೇನೆ ಎಂದು ಮೃತ ನೇಹಾಳ ತಂದೆ ನಿರಂಜನಯ್ಯ ಹಿರೇಮಠ ಅವರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ” ನನ್ನ ಮಗಳನ್ನು ಕೊಲೆ ಮಾಡಿರುವ ಫಯಾಜ್‌ನ ತಂದೆ-ತಾಯಿ ಮತ್ತು ಸಹೋದರಿ ನೀಡುತ್ತಿರುವ ಹೇಳಿಕೆ ನೋಡಿದರೆ ಅವರ ಕುಟುಂಬದಿಂದ ಫಯಾಜ್ ಕುಮ್ಮಕ್ಕು ಇದೆ. ಫಯಾಜ್ ಮತ್ತು ಕುಟುಂಬದವರ ಒಳಸಂಚು ಎನಿಸುತ್ತಿದೆ ” ಎಂದು ಆರೋಪಿಸಿದರು.

ನಾವೀಗ ಮಗಳ ಸಾವಿನ ದುಃಖದಲ್ಲಿ ನಾವು ಇದ್ದೇವೆ. ಆದರೆ, ನಮ್ಮ ಕುಟುಂಬದ ಗೌರವ ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ, ಆರೋಪಿ‌ ಫಯಾಜ್ ತಂದೆ-ತಾಯಿ ಮತ್ತು ಸಹೋದರಿ ವಿರುದ್ಧ ದೂರು ನೀಡುವೆ ಎಂದು ಹೇಳಿದರು.

Advertisement. Scroll to continue reading.

ನನ್ನ ಮಗಳ ಮತ್ತು ಆ ಹುಡುಗನ ಕುರಿತು ಪೋಟೋ, ವೀಡಿಯೋ ವೈರಲ್ ಆಗುತ್ತಿವೆ. ನನ್ನ ಮಗಳು ಸತ್ತ ಮೇಲೆ ಯಾರು ಪೋಟೋ ವೈರಲ್ ಮಾಡುತ್ತಿದ್ದಾರೆ? ಹುಬ್ಬಳ್ಳಿಯಲ್ಲಿ ಫಯಾಜ್‌ಗೆ ಆಶ್ರಯ ಕೊಟ್ಟವರು ಯಾರು? ಈ ರೀತಿ ವೈರಲ್‌ ಮಾಡುತ್ತಿರುವವರ ವಿರುದ್ಧ ಸಹ ಸೈಬರ್ ಕ್ರೈಮ್‌ಗೆ ದೂರು ನೀಡುವೆ ಎಲ್ಲಾ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಮಗಳ ಕೊಲೆಯಾದ ದಿನವೇ ಪೊಲೀಸರಿಗೆ ನಾಲ್ಕು ಮಂದಿಯ ಮೇಲೆ ಅನುಮಾನವಿದೆ ಎಂದು ಮಾಹಿತಿ ನೀಡಿದ್ದೆ. ಆದರೆ, ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿಲ್ಲ ಎಂದು ನಿರಂಜನಯ್ಯ ಆರೋಪ ಮಾಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

2 ಸದ್ಯ ಕಿರುತೆರೆಯಲ್ಲಿ ‘ಸೀತಾರಾಮ’ ಜನಪ್ರಿಯ ಧಾರಾವಾಹಿ. ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಈ ಧಾರಾವಾಹಿಗೆ ತನ್ನದೇ ಆದ ಅಭಿಮಾನಿ ಬಳಗವಿದೆ. ಅದರಲ್ಲೂ ಅಗ್ನಿಸಾಕ್ಷಿಯ ಸನ್ನಿಧಿ ಖ್ಯಾತಿಯ ವೈಷ್ಣವಿಗೌಡ ಈ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ್ದಾರೆ....

ಸಿನಿಮಾ

0 ಬೆಂಗಳೂರು: ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಚೇತನ್ ಚಂದ್ರ ಮೇಲೆ ಅಟ್ಯಾಕ್ ಮಾಡಲಾಗಿದೆ. ಸುಮಾರು 20 ಮಂದಿ ಅಟ್ಯಾಕ್ ಮಾಡಿದ್ದಾರೆ ಎಂದು...

ರಾಜ್ಯ

0 ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಎಸ್‌.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು...

ಜ್ಯೋತಿಷ್ಯ

0 ದಿನಾಂಕ : ೧೨-೦೫-೨೪, ವಾರ : ಭಾನುವಾರ ಹಣದ ಖರ್ಚು ಹೆಚ್ಚಿರಲಿದೆ. ಇದರಿಂದ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಹಣದ ವಿಚಾರಕ್ಕೆ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ....

ಜ್ಯೋತಿಷ್ಯ

0 ದಿನಾಂಕ: ೧೩-೦೫-೨೪, ವಾರ : ಸೋಮವಾರ, ನಕ್ಷತ್ರ : ಪುನರ್ವಸು, ತಿಥಿ: ಷಷ್ಠಿ ನೀವು ಪ್ರಮುಖ ಸಭೆಗೆ ಹಾಜರಾಗಬಹುದು. ಪ್ರೇಮ ಸಂಬಂಧಗಳಲ್ಲಿ ತೀವ್ರತೆ ಹೆಚ್ಚಾಗುವ ಸಾಧ್ಯತೆಗಳಿವೆ. ಕೆಲಸದ ಸ್ಥಳದಲ್ಲಿ ನೀವು ಸ್ನೇಹಿತರಿಂದ...

error: Content is protected !!