ಬೆಂಗಳೂರು : ಈ ಕೂಡಲೇ KSDL ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಂತ ಶಾಸಕ ಮಾಡಳ್ ವಿರೂಪಾಕ್ಷಗೆ ಸಿಎಂ ಸೂಚನೆ ನೀಡಿದ್ದಾರೆ
ತಮ್ಮ ಮಗನ ವಿರುದ್ದ ಕೇಳಿ ಬಂದಿರುವ ಆರೋಪವು ಪಕ್ಷಕ್ಕೆ ಮುಜುಗರವನ್ನು ಉಂಟು ಮಾಡಿದೆ. ಹೀಗಾಗಿ ನೀವು ಸಂಜೆಯೊಳಗೆ KSDL ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಅಂಥ ಸಿಎಂ ಶಾಸಕ ಮಾಡಳ್ ವಿರೂಪಾಕ್ಷಗೆ ಸಿಎಂ ಸೂಚನೆ ನೀಡಿದ್ದಾರೆ.
ಈ ನಡುವ ಲಂಚದ ಹಣದ ಕೇಸಿಗೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಪುತ್ರ ಪ್ರಶಾಂತ್ಗೆ ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇಂದು ಬೆಳಗ್ಗೆ ಆರೋಪಿ ಪ್ರಶಾಂತ್ ನನ್ನು ಲೋಕಾಯುಕ್ತ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ವೇಳೆಯಲ್ಲಿ ನ್ಯಾಯಾಧೀಶರು, 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸುವುದರ ಬಗ್ಗೆ ಆದೇಶ ಹೊರಡಿಸಿದೆ. ಇದೇ ವೇಳೆ ಪ್ರಶಾಂತ್ ಸೇರಿ ಒಟ್ಟು ಐವರಿಗೆ 14 ದಿನ ನ್ಯಾಯಾಂಗ ಬಂಧನದಲ್ಲಿ ಇಡುವ ಬಗ್ಗೆ ಆದೇಶ ನೀಡಲಾಗಿದೆ.

ಇನ್ನೂ ಇದೇ ವೇಳೆ ನಿನ್ನೆ ತಡರಾತ್ರಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ ₹6 ಕೋಟಿ ನಗದು ವಶ ಪಡಿಸಿಕೊಳ್ಳಲಾಗಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್ ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಗುರುವಾರ ಪ್ರಶಾಂತ್ ಅವರನ್ನು 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ವೇಳೆ ಇನ್ನೂ 1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.
ಬಳಿಕ ಸಂಜಯ ನಗರದಲ್ಲಿರುವ ಪ್ರಶಾಂತ್ ಮನೆಯ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಮನೆ ಶೋಧ ನಡೆಸಿದ ವೇಳೆಯಲ್ಲಿ, 6 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.
ಸದ್ಯ ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಶಕ್ಕೆ ಪಡೆದುಕೊಳ್ಳಬಹುದು ಎನ್ನಲಾಗಿದೆ.

