Connect with us

Hi, what are you looking for?

ರಾಜ್ಯ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು

1

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕುರಿತು ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ನೀಡಿದೆ.

ಹೈಕೋರ್ಟ್ ಏಕಸದಸ್ಯಪೀಠ ವಿಚಾರಣೆ ನಡೆಸಿದ್ದು, ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಮಾಡಾಳ್ ವಿರೂಪಾಕ್ಷಪ್ಪನವರ ಪರ ಹಿರಿಯ ವಕೀಲ ಕೆ. ಸುಮನ್ ವಾದ ಮಂಡಿಸಿದ್ದು, ವಿರೂಪಾಕ್ಷಪ್ಪ ವಿರುದ್ಧ ಎಫ್ ಐಆರ್ ನಲ್ಲಿ ಯಾವುದೇ ಆರೋಪಗಳಿಲ್ಲ, ಲೋಕಾಯುಕ್ತ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.

Advertisement. Scroll to continue reading.

ಟೆಂಡರ್ ಹಾಗೂ ಖರೀದಿ ಆದೇಶ ನೀಡಲಾಗಿದೆ. ಟೆಂಡರ್ ಅಂತಿಮಗೊಳಿಸುವ ಅಧಿಕಾರ ವಿರೂಪಾಕ್ಷಪ್ಪನವರದ್ದಲ್ಲ. ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ. ಮಗನೊಂದಿಗೆ ಮಾತನಾಡುವಂತೆ ತಿಳಿಸಿರುವುದಾಗಿ ಆರೋಪಿಸಲಾಗಿದೆ. ಒಂದೂ ರೂಪಾಯಿ ಪಡೆಯದೇ ಟೆಂಡರ್ ನೀಡಲಾಗಿದೆ. Bwwಯಲ್ಲಿ ಕೆಲಸ ಮಾಡುವ ಮಗನಿಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ಹೇಳಿದ್ದಾರೆ.

ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯಪೀಠ 5 ಲಕ್ಷ ಬಾಂಡ್ ಇಟ್ಟು, ಇಬ್ಬರು ಶ್ಯೂರಿಟಿ ಮಾಡಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ 48 ಗಂಟೆಗಳಲ್ಲಿ ಪೊಲೀಸರಿಗೆ ಶರಣಾಗುವಂತೆ ಹೇಳಿದೆ.

ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಶಾಸಕ ವಿರೂಪಾಕ್ಷಪ್ಪ, ಅವರ ಪುತ್ರ ಸೇರಿದಂತೆ ಐದು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಇಂದು ವಿಚಾರಣೆ ನಡೆಸಿ ತೀರ್ಪು ನೀಡಿದ ಹೈಕೋರ್ಟ್ ನ ಏಕಸದಸ್ಯ ಪೀಠ ಶಾಸಕರಿಗೆ ಮಧ್ಯಂತರ ಜಾಮೀನು ನೀಡಿ 48 ಗಂಟೆಗಳೊಳಗೆ ಶರಣಾಗುವಂತೆ ಆದೇಶ ನೀಡಿದೆ. ಲೋಕಾಯುಕ್ತ ಪೊಲೀಸರು ಸೂಕ್ತ ದಾಖಲೆ ಸಲ್ಲಿಸುವವರೆಗೆ ಶಾಸಕರಿಗೆ ಜಾಮೀನು ಸಿಕ್ಕಿದೆ.

Advertisement. Scroll to continue reading.

ಬಂಧನ ಭೀತಿಯಲ್ಲಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಳೆದ 6 ದಿನಗಳಿಂದ ತಲೆಮರೆಸಿಕೊಂಡಿದ್ದರು. 

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!