Connect with us

Hi, what are you looking for?

ರಾಜ್ಯ

ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ; ಬಿಗಿ ಭದ್ರತೆ

0

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ ಆರಂಭವಾಗಿದೆ.

ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 5,716 ಕಾಲೇಜುಗಳ ವಿದ್ಯಾರ್ಥಿಗಳು ಬರೆಯಲಿದ್ದು, ಬೆಳಗ್ಗೆ 10.15ರಿಂದ 1.30ರವರೆಗೆ ಪರೀಕ್ಷೆ ನಡೆಲಿದೆ. 7,26,195 ವಿದ್ಯಾರ್ಥಿಗಳಲ್ಲಿ 3,63,698 ಬಾಲಕರು ಮತ್ತು 3,62,497 ಬಾಲಕಿಯರು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಎಚ್ಚರವಹಿಸಲು 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲೂಕು ಜಾಗೃತ ದಳ ಮತ್ತು 2373 ವಿಶೇಷ ಜಾಗೃತ ದಳದವರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಈ ವರ್ಷ ಕರ್ನಾಟಕ ಸೆಕ್ಯೂರ್ ಎಕ್ಸಾಂ ಸಿಸ್ಟಂ ಅನ್ನು ಮುಂದುವರಿಸಿದ್ದು, ಇದರ ನಿರ್ವಹಣೆಗೆ ಮಂಡಳಿಯಲ್ಲೇ ಸಿಸಿಟಿವಿ ನಿಗಾ ಕೇಂದ್ರ ರೂಪಿಸಿದೆ. ಇಲ್ಲಿ 24*7 ಕಣ್ಗಾವಲಿನಲ್ಲಿರಲಿದೆ. ಎಂದಿನಂತೆ ಟ್ಯೂಷನ್ ಸೆಂಟರ್, ತರಬೇತಿ ಕೇಂದ್ರಗಳು, ಜೆರಾಕ್ಸ್ ಅಂಗಡಿಗಳು, ಸೈಬರ್ ಕೇಂದ್ರಗಳು, ಕಂಪ್ಯೂಟರ್ ಕೇಂದ್ರ ಮತ್ತು ಗೇಮ್ ಸೆಂಟರ್‍ಗಳನ್ನು ಬಂದ್ ಮಾಡಿಸಿ ನಿಗಾವಹಿಸಲು ಕ್ರಮ ತೆಗೆದುಕೊಂಡಿದೆ ಎಂದು ತಿಳಿಸಿದರು.

Advertisement. Scroll to continue reading.

ಕೃಪಾಂಕ ವಿಚಾರ ಕಳೆದ ಬಾರಿಯ ನಿಯಮವೇ ಈ ವರ್ಷ ಕೂಡ ಅನ್ವಯವಾಗಲಿದೆ. ವಿದ್ಯಾರ್ಥಿಗಳು ಮೊದಲು ಪರೀಕ್ಷೆ ಕಡೆ ಗಮನ ನೀಡಿ ಚೆನ್ನಾಗಿ ಬರೆಯಿರಿ. ಪರೀಕ್ಷೆ ವೇಳೆ ಕೃಪಾಂಕದ ಬಗ್ಗೆ ಆಲೋಚನೆ ಬೇಡ. ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ರವಾನಿಸುವವರ ಮೇಲೆ ಕ್ರಮ ಜರುಗಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭದ್ರತಾ ಕೇಂದ್ರಗಳ ಬಳಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗದವರ ಗಸ್ತು ನಿರ್ವಹಣೆ ಮಾಡಲಿದ್ದು, ಅನುಮಾನಸ್ಪದವಾಗಿ ನಡೆದುಕೊಳ್ಳುವವರನ್ನು ಬಂಧಿಸಲಾಗುವುದು ಎಂದು ಇದೇ ವೇಳೆ ಅವರು ಎಚ್ಚರಿಕೆ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!