ಉಡುಪಿ : ಇಂದು ರಾಜ್ಯಾದ್ಯಂತ ಆರಂಭಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನದ ಪರೀಕ್ಷೆಯು ಯಶಸ್ವಿಯಾಗಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.
ಇಂದು ಕನ್ನಡ ಮತ್ತು ಅರೇಬಿಕ್ ಭಾಷೆಯ ಪರೀಕ್ಷೆಗಳು ನಡೆದಿವೆ. ಕನ್ನಡ ಪರೀಕ್ಷೆ ಬರೆಯಲು 8,833 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 8,742 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 91 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ದಿನದ ಕನ್ನಡ ಪರೀಕ್ಷೆ ಬರೆಯಲು ದಾಖಲಿಸಿಕೊಂಡ 19,385 ವಿದ್ಯಾರ್ಥಿಗಳ ಪೈಕಿ 19,169 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, 216 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ.
Advertisement. Scroll to continue reading.

ಕನ್ನಡ ಪರೀಕ್ಷೆ ಬರೆದ 120 ಮಂದಿ ರಿಪಿಟರ್ಸ್ ವಿದ್ಯಾರ್ಥಿಗಳಲ್ಲಿ 94 ಮಂದಿ ಪರೀಕ್ಷೆ ಹಾಜರಾಗಿದ್ದು, 26 ಮಂದಿ ಗೈರಾಗಿದ್ದಾರೆ.