Connect with us

Hi, what are you looking for?

ಕರಾವಳಿ

ಕಾಪು : ಅಂಬುಲೆನ್ಸ್ ಡಿಕ್ಕಿ; ಚಿಕಿತ್ಸೆ ಫಲಿಸದೆ ಬೈಕ್ ಸವಾರ ಸಾವು

1

ಕಾಪು : ಬೈಕ್‌ಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಕಾಪು ರಾ.ಹೆ.66 ರಲ್ಲಿ ಅಪಘಾತ ಸಂಭವಿಸಿದ್ದು ಬಡಾಗ್ರಾಮದ ರಿತೇಶ್ ದೇವಾಡಿಗ(36) ಮೃತಪಟ್ಟಿದ್ದಾರೆ.

ನಿನ್ನೆ ಮಧ್ಯಾಹ್ನ ಮಂಗಳೂರು ಉಡುಪಿ ರಸ್ತೆಯಲ್ಲಿ  ಕೆಮ್ತೂರಿಗೆ ಹೊರಟಿದ್ದ ರಿತೇಶ್ ಬೈಕ್ ಗೆ, ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೊರಟಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದೆ.

Advertisement. Scroll to continue reading.

ಪರಿಣಾಮ ರಿತೇಶ ಬೈಕ್ ಸಹಿತ ರಸ್ತೆಗೆ ಬಿದ್ದು, ಅವರ  ತಲೆಗೆ  ತೀವ್ರ ಸ್ವರೂಪದ ಪೆಟ್ಟಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ಅಂಬುಲೆನ್ಸ್ ಚಾಲಕ ಶಿವಪ್ರಸಾದನ ಅತೀವೇಗ ಹಾಗೂ ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಅಲ್ಲದೇ  ರಾ.ಹೆ 66 ರ ಉಡುಪಿ-ಮಂಗಳೂರು ರಸ್ತೆಯನ್ನು ಅವೈಜ್ಞಾನಿಕವಾಗಿ ಕಿತ್ತುಹಾಕಿ ಹಲವು ದಿನಗಳು ಕಳೆದರು  ಕೂಡ ರಸ್ತೆಯನ್ನು  ದುರಸ್ತಿ ಮಾಡದೇ ಇರುವುದೂ ಅಪಘಾತಕ್ಕೆ ಕಾರಣ ಎಂದು ದೂರಲಾಗಿದೆ. ಈ ಬಗ್ಗೆ ಕಾಫು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!