ಉಡುಪಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಪ್ರಾರಂಭೋತ್ಸವ ಕಾರ್ಯಕ್ರಮ ಪಿಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪ್ರಾರಂಭೋತ್ಸವವನ್ನು ಭಾರತ ಮಾತೆ, ಸರಸ್ವತಿ, ಓಂಕಾರ ಭಾವಚಿತ್ರಕ್ಕೆ ದೀಪಬೇಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಅಮೃತ ಭಾರತಿ ಟ್ರಸ್ಟ್ ಸದಸ್ಯ ಬಾಲಕೃಷ್ಣ ಮಲ್ಯ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸಂಸ್ಕಾರಯುತ ಶಿಕ್ಷಣ ನಮ್ಮ ಧೇಯ್ಯವಾಗಿದೆ. ರಾಷ್ಟ್ರ ನಿರ್ಮಾಣ ಮಾಡಲು ತಮ್ಮನ್ನು ಅರ್ಪಿಸಿಕೊಂಡ ಸ್ವತಂತ್ರ ಹೋರಾಟಗಾರರ ಛಲವನ್ನು ನಮ್ಮಲ್ಲಿ ಒಗ್ಗೂಡಿಸಿಕೊಳ್ಳಬೇಕು. ಜೊತೆಗೆ ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ಸಿಎ ಎಂ .ರವಿರಾವ್ , ಕಾರ್ಯದರ್ಶಿ ಗುರುದಾಸ್ ಶೆಣೈ , ಅಮೃತ ಭಾರತಿ ವಿದ್ಯಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಶೈಲೇಶ್ ಕಿಣಿ , ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಸಂಚಾಲಕ ರಾಜೇಶ್ ನಾಯಕ್, ಅಮೃತ ಭಾರತಿ ವಸತಿ ನಿಲಯದ ಅಧ್ಯಕ್ಷ ಯೋಗೀಶ್ ಭಟ್, ಸದಸ್ಯ ಸುಧೀರ್ ನಾಯಕ್, ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶಕುಂತಲಾ, ಅಪರ್ಣ ಉಪಸ್ಥಿತರಿದ್ದರು.
ಸಂಸ್ಥೆಯ ಸಂಸ್ಕೃತ ಗುರೂಜಿ ವೇದವ್ಯಾಸ ತಂತ್ರಿ ಕಾರ್ಯಕ್ರಮ ನಿರೂಪಿಸಿದರು. ಆರತಿ ಬೆಳಗಿ, ಹಣೆಗೆ ತಿಲಕ ಹಚ್ಚಿ, ಸಿಹಿ ನೀಡಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು. ಸೆಲ್ಫಿ ಕಾರ್ನರ್, ರೈಲು ಮಾದರಿ ವಿದ್ಯಾರ್ಥಿಗಳಿಗೆ ತುಂಬಾ ಆಕರ್ಷಣೆ ಆಗಿತ್ತು.