Connect with us

Hi, what are you looking for?

ಕರಾವಳಿ

ಉಡುಪಿ : ಸಮಾಜಸೇವಕ, ಕಾಂಗ್ರೆಸ್ ಮುಖಂಡ ಕೆ.ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ಸಿಗಬೇಕೆಂದು ಶ್ರೀರಾಘವೇಂದ್ರ ಮಠದಲ್ಲಿ ಪ್ರಾರ್ಥಿಸಿದ ಕಾರ್ಯಕರ್ತರು| Video

1

ಉಡುಪಿ : ಸಮಾಜಸೇವಕ, ಕಾಂಗ್ರೆಸ್ ಮುಖಂಡ ಕೆ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ಸಿಗಲಿ ಇಂದು ಬೆಳಿಗ್ಗೆ ಕೃಷ್ಣಮೂರ್ತಿ ಅವರ ಅಭಿಮಾನ ಬಳಗ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೊತೆಗೂಡಿ ಉಡುಪಿಯ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ ಜಯಶೆಟ್ಟಿ ಬನ್ನಂಜೆ ಅವರ ನೇತೃತ್ವದಲ್ಲಿ ಶ್ರೀ ಗುರುರಾಯರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಒಂದು ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹೆಸರು ನಮೂದಿಸದಿದ್ದಲ್ಲಿ ಅಂತಹ ಸಂದರ್ಭದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ಹಿಂಜರಿಯಬಾರದು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೂಡ ಅವರ ಜೊತೆ ಕೈಜೋಡಿಸುತ್ತೇವೆ. ಕೃಷ್ಣಮೂರ್ತಿಯವರು ವಿಜಯಮಾಲೆ ಧರಿಸುವುದರಲ್ಲಿ ಸಂಶಯವೇ ಇಲ್ಲ ಎಂದು ಈ ವೇಳೆ ಜಯಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಕೃಷ್ಣಮೂರ್ತಿ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷರಾದ ಚರಣ್ ರಾಜ್ ಬಂಗೇರ,
ಯಶೋದ ಆಟೋ ಯೂನಿಯನ್ ಅಧ್ಯಕ್ಷರಾದ ಉದಯ್, ಚಾಂತಾರುಗ್ರಾಮ ಪಂಚಾಯತ್‌ನ ಸದಸ್ಯ ಸಂದೇಶ್ ಶೆಟ್ಟಿ,
ಚಾಂತಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆಯಾದ ಸರಸ್ವತಿ, ಬ್ರಹ್ಮಾವರ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷೆ ಗಾಯತ್ರಿ,
ಸಂತೆಕಟ್ಟೆ ಗೂಡ್ಸ್ ಟೆಂಪೋ ಚಾಲಕರ ಮಾಜಿ ಅಧ್ಯಕ್ಷರು ಆದ ಜಯಕರ ಸುವರ್ಣ ಕಲ್ಯಾಣಪುರ, ಮಹೇಶ್ ಮಲ್ಪೆ ಹರೀಶ್ ಅಮೀನ್, ಪ್ರವೀಣ್ ಬಾರ್ಕೂರ್. ಪ್ರವೀಣ್ ಪೂಜಾರಿ, ಶೈಲೇಶ್ ಭಾಸ್ಕರ ಪಿ. ಅಮೀನ್, ರವಿ ಸದಾನಂದ, ಶೇರಿಗಾರ್. ಪ್ರಸಾದ್ ಆಚಾರ್ಯ, ಗಣೇಶ್ ಶೆಟ್ಟಿ ಕೀಳಿಂಜೆ, ವಾಲ್ಟರ್ ಡಿಸೋಜ ಕೊಳಲಗಿರಿ, ರಾಜೇಶ್ ಪ್ರಭು ಪರ್ಕಳ, ರಾಜೇಶ್ ನಿಟ್ಟೂರು, ಯಶೋಧ ಯೂನಿಯನ್‌ನ ಪದಾಧಿಕಾರಿಗಳು, ಕೃಷ್ಣಮೂರ್ತಿ ಅಭಿಮಾನಿಗಳ ಬಳಗದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೊತೆಗಿದ್ದರು. ಈ ಕಾರ್ಯಕ್ರಮವನ್ನು ಗಣೇಶ್ ರಾಜ್ ಬೆಟ್ಟು ಸಂಘಟಿಸಿ, ಗಣೇಶ್ ಶೆಟ್ಟಿ ಕೀಳಿಂಜೆ ವಂದಿಸಿದರು.

ಈ ಸಂದರ್ಭದಲ್ಲಿ 101 ತೆಂಗಿನಕಾಯಿ ರಾಘವೇಂದ್ರ
ಮಠದ ಮುಂಭಾಗ ಒಡೆಯಲಾಯಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!