Connect with us

Hi, what are you looking for?

ಕರಾವಳಿ

ಬ್ರಹ್ಮಾವರ : ಜ್ವರ, ಹೊಟ್ಟೆನೋವು; ಎರಡು ವರ್ಷದ ಮಗು ಸಾವು

1

ಬ್ರಹ್ಮಾವರ : ಜ್ವರ, ಹೊಟ್ಟೆನೋವಿನಿಂದ ಬಳಲುತ್ತಿದ್ದ ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಆರೂರು ಗ್ರಾಮದಲ್ಲಿ ನಡೆದಿದೆ.

ಖುಷಿ ಮೃತ ಮಗು.

ಬಿಹಾರ ರಾಜ್ಯ ಮೂಲದವರಾದ ರಾಜ್‌ ಕುಮಾರ್‌, ತನ್ನ ಹೆಂಡತಿ, ಮಕ್ಕಳೊಂದಿಗೆ ಪ್ರಸ್ತುತ ಬ್ರಹ್ಮಾವರ ತಾಲೂಕು ಆರೂರು ಗ್ರಾಮದ ಹೆಬ್ಬಾರು ಬೆಟ್ಟು ಎಂಬಲ್ಲಿ ಸಕಲೇಶಪುರದ ಎನ್‌.ಆರ್‌ ವಿವೇಕ್‌ ಎಂಬವರಿಗೆ ಸಂಬಂಧಿಸಿದ ಕೃಷಿ ಫಾರ್ಮ್‌ ನ ಬಿಡಾರದಲ್ಲಿ ವಾಸಮಾಡಿಕೊಂಡಿದ್ದರು. ಫಾರ್ಮ್‌ ನಲ್ಲಿಯೇ ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರ ಎರಡು ವರ್ಷದ ಮಗಳಾದ ಖುಷಿಗೆ ಬುಧವಾರ ಜ್ವರ ಹಾಗೂ ಹೊಟ್ಟೆ ವೋವು ಕಾಣಿಸಿಕೊಂಡಿದೆ.

Advertisement. Scroll to continue reading.

ಅವಳನ್ನು ಪೇತ್ರಿಯ ಪ್ರಾಥಮಿಕ ಆಸ್ಪತ್ರೆಯ ವೈದ್ಯರ ಬಳಿ ಹೋದಾಗ ವೈದ್ಯರು ಸಿರಪ್‌ ನೀಡಿದ್ದು, ಅಲ್ಲದೇ ಅವಳಿಗೆ 10 ದಿನಗಳ ಹಿಂದೆ ಹುಷಾರಿಲ್ಲದೇ ಇದ್ದಾಗ ನೀಡಿದ ಉಳಿದ ½ ಮಾತ್ರೆ ತೆಗೆದುಕೊಳ್ಳುವಂತೆ ಸೂಚಿಸಿದ್ದರು. ಮನೆಗೆ ಬಂದು ಅವಳಿಗೆ 1 ವಾರದ ಹಿಂದೆ ಮನೆಯಲ್ಲಿ ತಂದಿಟ್ಟಿದ್ದ ಹಾಲನ್ನು ಬಿಸಿ ಮಾಡಿ ಆರಿಸಿ ಸ್ವಲ್ಪ ನೀಡಿ, ಬಳಿಕ 5 ಎಮ್‌ಎಲ್‌ ಸಿರಪನ್ನು ನೀಡಿ, ನಂತ್ರ ½  ಮಾತ್ರೆಯನ್ನು ಪುಡಿ ಮಾಡಿ ಸ್ವಲ್ಪ ಹಾಲನ್ನು ಹಾಕಿ ಕುಡಿಸಿ  ಮಲಗಿಸಿದ್ದಾರೆ.

ಬಳಿಕ ಮಧ್ಯಾಹ್ನ 3:00 ಗಂಟೆಯ ವೇಳೆ ಖುಷಿಯು ತೀರಾ ಅಸ್ವಸ್ಥಗೊಂಡಿದ್ದು, ಅವಳನ್ನು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಖುಷಿ ಈಗಾಗಲೆ  ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.

ಈ  ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!