Connect with us

Hi, what are you looking for?

ರಾಷ್ಟ್ರೀಯ

ಸಿಕಂದರಾಬಾದ್‌ನ ವಸತಿಗೃಹದಲ್ಲಿ ಬೆಂಕಿ ಅವಘಡ: ಆರು ಮಂದಿ ಸಾವು

1



ಸಿಕಂದರಾಬಾದ್ : ವಸತಿ ಸಮುಚ್ಚಯದಲ್ಲಿ ನಿನ್ನೆ ರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿ ಆರು ಜನರು ಮೃತಪಟ್ಟಿರುವ ಘಟನೆ ನಡೆದಿದೆ.

ರಾತ್ರಿ 7:30ರ ಸುಮಾರಿಗೆ ಕಾಂಪ್ಲೆಕ್ಸ್‌ನ 7 ಮತ್ತು 8ನೇ ಮಹಡಿಗಳಲ್ಲಿ ಹೊಗೆ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಎರಡೂ ಅಂತಸ್ತುಗಳನ್ನು ಆವರಿಸಿಕೊಂಡಿತ್ತು. ಅವಘಡದಲ್ಲಿ ಹಲವರು ಕಾಂಪ್ಲೆಕ್ಸ್‌ನೊಳಗೆ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ತೆಲಂಗಾಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ತಡರಾತ್ರಿಯವರೆಗೂ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು ಹಾಗೂ ಸಿಬ್ಬಂದಿಗಳು ಎತ್ತರದ ಕ್ರೇನ್‌ಗಳನ್ನು ಬಳಸಿ ಹಲವರನ್ನು ಕಟ್ಟಡದಿಂದ ಹೊರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರ ವಲಯ ಡಿಸಿಪಿ ಚಂದನಾ ದೀಪ್ತಿ ಅವರ ಪ್ರಕಾರ, ‘ಘಟನೆಯಲ್ಲಿ ನಾಲ್ಕು ಹುಡುಗಿಯರು ಮತ್ತು ಇಬ್ಬರು ಹುಡುಗರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಬೆಂಕಿ ಹೊತ್ತಿಕೊಂಡಾಗ ಅವರು ಕಾಂಪ್ಲೆಕ್ಸ್‌ನೊಳಗೆ ಇದ್ದರು. ಅವರನ್ನು ಹೊರತೆಗೆಯುವಷ್ಟರಲ್ಲಿ ಅವರ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಇನ್ನುಳಿದ 7 ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!