Connect with us

Hi, what are you looking for?

ರಾಜ್ಯ

ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಗೆ ಪರಿಷ್ಕ್ರತ ‘ಪ್ರವೇಶ ಪತ್ರ’ ಬಿಡುಗಡೆ

1

ಬೆಂಗಳೂರು : 2022-23ನೇ ಸಾಲಿನ 5 ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗೆ ಶಿಕ್ಷಣ ಇಲಾಖೆ ಪರಿಷ್ಕ್ರತ ‘ಪ್ರವೇಶ ಪತ್ರ’ ಬಿಡುಗಡೆ ಮಾಡಲಾಗಿದೆ.

2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ:13.03.2023 ರಿಂದ ಮೌಲ್ಯಾಂಕನವನ್ನು (ಸಂಕಲನಾತ್ಮಕ ಮೌಲ್ಯಮಾಪನ SA-2 ನಡೆಸುವಂತೆ ಉಲ್ಲೇಖ(1 ಮತ್ತು 2)ರಲ್ಲಿ ತಿಳಿಸಲಾಗಿತ್ತು.

ಸದರಿ ಮೌಲ್ಯಾಂಕನವನ್ನು ಉಲ್ಲೇಖ(3) ರಂತೆ ಮುಂದೂಡಲಾಗಿತ್ತು.ಮುಂದುವರೆದು, 5 ಮತ್ತು 8ನೇ ತರಗತಿಗಳಿಗೆ ದಿನಾಂಕ:27.03,2023 ರಿಂದ ಮೌಲ್ಯಾಂಕನವನ್ನು ನಡೆಸಲು ಕೋರ್ಟ್ ಅವಕಾಶ ಕಲ್ಪಿಸಿದ್ದು, ಈ ಸಂಬಂಧ ಪರಿಷ್ಕೃತ ಪ್ರವೇಶ ಪತ್ರದ ಮಾದರಿಯನ್ನು ದಿನಾಂಕ:18.03.2023 ರಂದು ಮಂಡಲಿಯ ವೆಬ್ಸೈಟ್ನಲ್ಲಿ (https://kseab.karnataka.gov.in/) ಪ್ರಕಟಿಸಲಾಗಿರುತ್ತದೆ ಎಂದು ಶಿಕ್ಷಣ ಇಲಾಖೆಯ ಕಾರ್ಯ ನಿರ್ವಾಹಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

Advertisement. Scroll to continue reading.

ಈ ಹಿಂದೆ ನೀಡಲಾದ ಪ್ರವೇಶ ಪತ್ರಗಳ ಬದಲಾಗಿ ಪರಿಷ್ಕೃತ ದಿನಾಂಕದೊಂದಿಗೆ ಲಭ್ಯ ಮಾಡಲಾಗಿರುವ ಮಾದರಿ ಪ್ರವೇಶ ಪತ್ರಗಳನ್ನು ಶಾಲೆಯ ಮುಖ್ಯ ಶಿಕ್ಷಕರು Download ಮಾಡಿಕೊಂಡು ಪ್ರವೇಶ ಪತ್ರದಲ್ಲಿ SATS ID, ಶಾಲೆಯ ಡೈಸ್ ಸಂಕೇತ ಮತ್ತು ವಿಳಾಸ, ವಿದ್ಯಾರ್ಥಿಯ ಹೆಸರು, ವಿದ್ಯಾರ್ಥಿಯ ಮಾಧ್ಯಮ ಇನ್ನಿತರೆ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು ಹಾಗೂ ಯಾವುದೇ ವಿದ್ಯಾರ್ಥಿಗಳು ಮಾಹಿತಿಯ ಕೊರತೆಯಿಂದಾಗಿ ಮೌಲ್ಯಾಂಕನದಿಂದ ವಂಚಿತರಾಗದಂತೆ ಕ್ರಮವಹಿಸಲು ಎಲ್ಲಾ ಹಂತದ ಅಧಿಕಾರಿಗಳಿಗೆ ಮತ್ತು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!