ಕಾರ್ಕಳ : ನಿಸರ್ಗದತ್ತ ಪ್ರಕೃತಿ ಸೌಂದರ್ಯ ಹೊಂದಿರುವ ಮಾಳ ಗ್ರಾಮದಲ್ಲಿ, ಪರಿಸರಕ್ಕೆ ಪೂರಕವಾದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಜಿಲ್ಲಾಡಳಿತ ಸಿದ್ಧವಿದ್ದು, ಇದಕ್ಕಾಗಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಜೊತೆ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಲ್ಲಾರು ಶ್ರೀಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾಳ ಗ್ರಾಮದಲ್ಲಿ ಇದುವರೆಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯದೆ ಇರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಸರಕಾರದ ಯೋಜನೆಗಳನ್ನು ಆದ್ಯತೆಯಲ್ಲಿ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ನಡೆ ಹಳ್ಳಿ ನಡೆ ಕಾರ್ಯಕ್ರಮದ ಮೂಲಕ, ಇಡೀ ಜಿಲ್ಲಾಡಳಿತ ಸಾರ್ವಜನಿಕರ ಮನೆ ಬಾಗಿಲಿಗೆ ಆಗಮಿಸಿ, ಅವರ ಗ್ರಾಮದ ಎಲ್ಲಾ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ನೆರವು ಒದಗಿಸುತ್ತಿದ್ದು, ಜಿಲ್ಲೆಯಲ್ಲಿ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಪಿಡಬ್ಲೂö್ಯಡಿ, ಭೂ ಮಾಪನ ಇಲಾಖೆ, ಪಿ.ಅರ್.ಇ.ಡಿ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗೆ ಸಂಬAಧಿಸಿದ 80 ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಸ್ಥಳದಲ್ಲಿಯೇ 55 ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ವಿಲೇ ಮಾಡಿ, ಉಳಿದ ಅರ್ಜಿಗಳನ್ನು ಸಂಬAಧಪಟ್ಟ ಇಲಾಖೆಗೆ ವರ್ಗಾವಣೆಗೊಳಿಸಿ, ಆದ್ಯತೆಯಲ್ಲಿ ಈ ಅರ್ಜಿಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಳ ಗ್ರಾಮ ಪಂಚಾಯತ್ ಅಧ್ಯಕ್ಷೆ ರಕ್ಷಿತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಕುದುರೆಮುಖ ಎ.ಸಿ.ಎಫ್ ಲೇಖರಾಜ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಉಪಸ್ಥಿತರಿದ್ದರು.
ಕಾರ್ಕಳ ತಹಶೀಲ್ದಾರ್ ಅನಂತ ಶಂಕರ್ ಸ್ವಾಗತಿಸಿ, ವಂದಿಸಿದರು.

You May Also Like
ಕರಾವಳಿ
2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...
Uncategorized
2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...
Uncategorized
1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...
Uncategorized
1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...