Connect with us

Hi, what are you looking for?

ರಾಷ್ಟ್ರೀಯ

ಖ್ಯಾತ ಗಾಯಕ ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ.ನಗದು ಕಳವು!!

0

ಮುಂಬೈ : ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರ ತಂದೆ ಮನೆಯಿಂದ ಬರೋಬ್ಬರಿ 72 ಲಕ್ಷ ರೂ. ನಗದು ಕಳವಾಗಿರುವ ಬಗ್ಗೆ ವರದಿಯಾಗಿದೆ.

ಸೋನು ನಿಗಮ್ ಅವರ ತಂದೆ ಅಗಾಕುಮಾರ್ ನಿಗಮ್ ಅವರು ವಾವಿರುವ ಓಶೀವಾರದ ವಿಂಡ್ಸರ್ ಗ್ರಾಂಡ್ ನಲ್ಲಿ ಕಳ್ಳತನ ನಡೆದಿದೆ. ಮಾರ್ಚ್ 19 ರಂದು ಅಗಾ ಕುಮಾರ್ ನಿಗಮ್ ಅವರು ತಮ್ಮ ಕಿರಿಯ ಪುತ್ರಿ ನಿಖಿತಾ ಅವರ ನಿವಾಸಕ್ಕೆ ತೆರಳಿದ್ದು, ಮನೆಗೆ ವಾಪಸ್ ಬಂದಾಗ ಡಿಜಿಟಲ್ ಲಾಕರ್ ನಲ್ಲಿದ್ದ 40 ಲಕ್ಷ ರೂಪಾಯಿ ಕಾಣೆಯಾಗಿತ್ತು. ಈ ವಿಷಯವನ್ನು ತಮ್ಮ ಪುತ್ರಿಗೆ ತಿಳಿಸಿದ್ದು, ಹುಡುಕಾಟ ನಡೆಸಿದ್ದರು. ಈ ನಡುವೆ ಮಾರ್ಚ್ 20ರಂದು ವೀಸಾ ಸಂಬಂಧಿ ಕೆಲಸಗಳಿಗಾಗಿ ಆಗಾಕುಮಾರ್ ಸೋನು ನಿಗಮ್ ಅವರ ನಿವಾಸಕ್ಕೆ ತೆರಳಿದ್ದು ವಾಪಸ್ ಬಂದಾಗ ಮತ್ತೆ 32 ಲಕ್ಷ ರೂಪಾಯಿ ಕಾಣೆಯಾಗಿದ್ದು ಕಂಡುಬಂದಿತ್ತು. ಎರಡು ದಿನಗಳ ಅವಧಿಯಲ್ಲಿ ಒಟ್ಟು 72 ಲಕ್ಷ ರೂಪಾಯಿ ಕಳತನವಾಗಿದೆ ಎಂದು ತಿಳಿದು ಬಂದಿದೆ.

Advertisement. Scroll to continue reading.

ಸಿಸಿ ಟಿವಿ ಪರಿಶೀಲಿಸಿದ ವೇಳೆ ತಮ್ಮಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ರೆಹಾನ್ ಬ್ಯಾಗ್ ಜೊತೆ ತೆರಳಿದ್ದು ಕಂಡುಬಂದಿತ್ತು. ಎಂಟು ತಿಂಗಳಿನಿಂದ ಆಗಾಕುಮಾರ್ ಅವರ ಕಾರು ಚಾಲಕನಾಗಿದ್ದ ರೆಹಾನ್ ನನ್ನು ಇತ್ತೀಚೆಗಷ್ಟೇ ಕೆಲಸದಿಂದ ತೆಗೆದು ಹಾಕಲಾಗಿತ್ತು. ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಸೋನು ನಿಗಮ್ ಅವರ ಸಹೋದರಿ ಮುಂಬೈನ ಓಶೀವಾರ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಕೇಸ್‌ ದಾಖಲಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!