Connect with us

Hi, what are you looking for?

ರಾಜ್ಯ

ಮಾ.31 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

2

ಬೆಂಗಳೂರು : ಮಾ.31 ರಿಂದ ರಾಜ್ಯದಾದ್ಯಂತ ಪರೀಕ್ಷೆ ಗಳು ಆರಂಭಗೊಳ್ಳಲಿದ್ದು ಎ.15 ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ಪರೀಕ್ಷೆಯನ್ನು ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ ವ್ಯಾಪ್ತಿಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಸಿಆರ್‌ಪಿಸಿ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳನ್ನು ಪ್ರವೇಶಿಸುವುದನ್ನು ನಿಷೇಧಿಸಿದೆ. ಪರೀಕ್ಷೆ ನಡೆಯಲಿರುವ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ. ಇದರೊಂದಿಗೆ ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಜೆರಾಕ್ಸ್, ಫ್ಯಾಕ್ಸ್ ಅಂಗಡಿಗಳು ತೆರೆಯುವುದನ್ನು ನಿರ್ಬಂಧಿಸಿದೆ. ಮೊಬೈಲ್ ಬಳಕೆಯನ್ನು ನಿರ್ಬಂಧಿಸಿ

ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಮಂಡಲಿ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಪರೀಕ್ಷೆಗೆ ಕುರಿತಾದ ಯಾವುದೇ ಗೊಂದಗಳಿದ್ದರೆ ಸಹಾಯವಾಣಿ ಸಂಖ್ಯೆ 080-23310075/76 ಈ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಭಾನುವಾರ ಹಾಗೂ ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಂದು ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಹಾಗೂ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದು.

Advertisement. Scroll to continue reading.

ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾ ಪಟ್ಟಿ ಹೀಗಿದೆ

31-03-2023 – ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.
04-04-2023 -ಗಣಿತ ಶಾಸ್ತ್ರ, ಸಮಾಜ ಶಾಸ್ತ್ರ.
06-04-2023- ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ.
10-04-2023- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.
12-04-2023- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ..
15-04-2023 – ಸಮಾಜ ವಿಜ್ಞಾನ

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!