Connect with us

Hi, what are you looking for?

ರಾಜ್ಯ

ಎಸ್‌ಸಿ ಸಮುದಾಯಕ್ಕೆ ಒಳ ಮೀಸಲಾತಿ ಪ್ರಕಟ; ಮುಸ್ಲಿಂ 2ಬಿ ಮೀಸಲಾತಿ ರದ್ದು : ಸಿಎಂ ಬೊಮ್ಮಾಯಿ

0

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಮೀಸಲಾತಿ ನಿರ್ಧಾರ ಕೈಗೊಳ್ಳಲಾಗಿದೆ. ಒಳಮೀಸಲಾತಿ ಹಾಗೂ ವೀರಶೈವ ಲಿಂಗಾಯತರ 2D ಮತ್ತು ಒಕ್ಕಲಿಗರ 2C ಪ್ರವರ್ಗಕ್ಕೆ ಮೀಸಲಾತಿ ನೀಡಿ ಒಪ್ಪಿಗೆ ನೀಡಲಾಗಿದೆ. ಇತ್ತ 2Bಯಡಿಯ ಮುಸ್ಲಿಂ ಮೀಸಲಾತಿಗೆ 2D ಮತ್ತು 2C ಮೀಸಲಾತಿಗಾಗಿ ಸರ್ಕಾರ ಕತ್ತರಿ ಹಾಕಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿಗೆ ಒಪ್ಪಿಗೆ ನೀಡಲಾಗಿದೆ. ಇತ್ತ 2Bಯಲ್ಲಿನ ಮುಸ್ಲಿಂ‌ ಮೀಸಲಾತಿಗೆ ಕತ್ತರಿ ಹಾಕಿದ್ದು, ಅದನ್ನು 2D ಮತ್ತು 2Cಗೆ ಮರು ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ. ಆ ಮೂಲಕ ಒಕ್ಕಲಿಗರಿಗೆ 2Cಯಡಿ 6% ಮತ್ತು ವೀರಶೈವ ಲಿಂಗಾಯತರಿಗೆ 2Dಯಡಿ 7% ಮೀಸಲಾತಿ ನೀಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಒಳಮೀಸಲಾತಿ ಸಂಬಂಧ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿದ್ದೆವು. ಅದರ ಪ್ರಕಾರ ಎಸ್ಸಿ ಮೀಸಲಾತಿಯಡಿ ಎಲ್ಲರಿಗೂ ನ್ಯಾಯ ಸಿಗಬೇಕು. ಅವರ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Advertisement. Scroll to continue reading.

ARTICLE 342 ಅನ್ವಯ ಎಸ್​ಸಿ ಗಳನ್ನು ನಾಲ್ಕು ಗುಂಪಲ್ಲಿ ವರ್ಗೀಕರಿಸಲಾಗಿದೆ. ಎಸ್​ಸಿ ಎಡ, ಎಸ್​ಸಿ ಬಲ, ಸ್ಪರ್ಶಿಯರು, ಇತರರೆಂದು ನಾಲ್ಕು ವರ್ಗಗಳಾಗಿ ವಿಂಗಡನೆ ಮಾಡಲಾಗಿದೆ. ಸಂಪುಟ ಉಪಸಮಿತಿ ವರದಿಯ ಆಧಾರದಲ್ಲಿ ಎಡಕ್ಕೆ 6%, ಬಲಕ್ಕೆ 5.5%, ಸ್ಪರ್ಶಿಯರು 4.5%, ಇತರರಿಗೆ 1% ಒಳ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ.

ನ್ಯಾ.ಸದಾಶಿವ ಆಯೋಗದ ವರದಿಯ ಪ್ರಕಾರ ಪರಿಶಿಷ್ಟ ಜಾತಿಯ 101 ಉಪಜಾತಿಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡುವಂತೆ ಶಿಫಾರಸು ಮಾಡಲಾಗಿದೆ. ಇದರ ಪ್ರಕಾರ ಶೇ.33.4ರಷ್ಟಿರುವ ಒಂದನೇ ಗುಂಪಿಗೆ (ಎಡಗೈ ಪ.ಜಾ) ಶೇ.6, ಶೇ.32ರಷ್ಟಿರುವ (ಬಲಗೈ ಪ.ಜಾ) ಎರಡನೇ ಗುಂಪಿಗೆ ಶೇ.5, ಶೇ.23.64ರಷ್ಟಿರುವ (ಸ್ಪರ್ಶ ಪರಿಶಿಷ್ಟ ಜಾತಿ) ಮೂರನೇ ಗುಂಪಿಗೆ ಶೇ.3 ಮತ್ತು ಶೇ.4.65 ರಷ್ಟಿರುವ ಇತರ ಪರಿಶಿಷ್ಟ ಜಾತಿಯವರಿಗೆ ಶೇ.1ರಷ್ಟು ಮೀಸಲಾತಿಯನ್ನು ಹಂಚಿಕೆ ಮಾಡುವಂತೆ ಶಿಫಾರಸು ಮಾಡಿತ್ತು.

ಇದೇ ವೇಳೆ ಸ್ಪರ್ಶ್ಯ ಜಾತಿಗಳಾದ ಲಂಬಾಣಿ, ಬೋವಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿಯ ಗುಂಪಿನಿಂದ ಹೊರಗಿಡಬೇಕೆಂಬ ಬೇಡಿಕೆಯನ್ನು ಆಯೋಗ ತಿರಸ್ಕರಿಸಿತ್ತು. ಸಮೀಕ್ಷೆಯ ಪ್ರಕಾರ ಎಡಗೈ ಗುಂಪಿನ (ಮಾದಿಗ ಜಾತಿ) ಜನಸಂಖ್ಯೆ 32,35,517 (ಶೇ. 33.47), ಬಲಗೈ ಗುಂಪಿನ (ಹೊಲೆಯ ಜಾತಿ) ಜನಸಂಖ್ಯೆ 30,93,693 (ಶೇ. 32.01), ಇತರೆ ಪರಿಶಿಷ್ಟ ಜಾತಿಗಳು 4,49,879 (ಶೇ. 46.5) ಮತ್ತು ಸ್ಪೃಶ್ಯ ಜಾತಿಗಳ ಜನಸಂಖ್ಯೆ 22,84,642 (ಶೇ. 23.64) ಇದೆ. ಬೊಮ್ಮಾಯಿ‌ ಸರ್ಕಾರ ಪರಿಶಿಷ್ಟ ಜಾತಿಗಿರುವ 17% ಮೀಸಲಾತಿಯನ್ನು ಸಂಪುಟ ಉಪಸಮಿತಿ ವರದಿಯ ಆಧಾರದಲ್ಲಿ ಎಡಕ್ಕೆ 6%, ಬಲಕ್ಕೆ 5.5%, ಸ್ಪರ್ಶಿಯರು 4.5%, ಇತರರಿಗೆ 1%ರಂತೆ ಒಳ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ.

ನ್ನು, 2Bಯಡಿ ಇದ್ದ ಮುಸ್ಲಿ ಸಮುದಾಯದ 4% ಮೀಸಲಾತಿಗೆ ಬಿಜೆಪಿ ಸರ್ಕಾರ ಸಂಪೂರ್ಣ ಕತ್ತರಿ ಹಾಕಿದೆ. ಈ 4% ಮೀಸಲಾತಿಯನ್ನು ಹೊಸದಾಗಿ ಸೃಷ್ಟಿ ಮಾಡಲಾಗಿರುವ ಒಕ್ಕಲಿಗರಿಗಾಗಿನ 2C ಪ್ರವರ್ಗ ಹಾಗೂ ವೀರಶೈವ ಲಿಂಗಾಯತರಿಗಾಗಿನ 2D ಪ್ರವರ್ಗಕ್ಕೆ ತಲಾ 2%ರಂತೆ ಹಂಚಿಕೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

Advertisement. Scroll to continue reading.

ಆ ಮೂಲಕ ಒಕ್ಕಲಿಗರಿಗೆ 2Cಯಡಿ 6% ಮತ್ತು ವೀರಶೈವ ಲಿಂಗಾಯತರಿಗೆ 2Dಯಡಿ 7% ಮೀಸಲಾತಿ ನೀಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 2C ಯಡಿ ಒಕ್ಕಲಿಗರಿಗೆ 4% ಇದ್ದ ಮೀಸಲಾತಿಗೆ 2% ಸೇರ್ಪಡೆಯಾಗಿ 6%ಗೆ ಏರಿಕೆ ಯಾಗಿದೆ‌. ಇನ್ನು 2Dಯಡಿ ಶೇ.5 ಇದ್ದ ಮೀಸಲಾತಿಗೆ 2% ಸೇರ್ಪಡೆಯಾಗಿ 7%ಗೆ ಮೀಸಲಾತಿ ಏರಿಕೆ ಮಾಡಲಾಗಿದೆ.

ಮುಸ್ಲಿಂ ಮೀಸಲಾತಿ EWSಗೆ ಶಿಫ್ಟ್: 2B ಯಡಿ ಇದ್ದ 4% ಮುಸ್ಲಿಂ ಮೀಸಲಾತಿಗೆ ಸಂಪೂರ್ಣ ಕತ್ತರಿ ಹಾಕಲಾಗಿದೆ. ಈಗ ಅದರಲ್ಲಿ ಇರುವ ಆರ್ಥಿಕವಾಗಿ ಹಿಂದುಳಿದ ಮುಸ್ಲಿಂ ಸಮುದಾಯದರವರನ್ನು EWS 10% ಮೀಸಲಾತಿಗೆ ಶಿಫ್ ಮಾಡಲು ನಿರ್ಧರಿಸಲಾಗಿದೆ.

2b ಧಾರ್ಮಿಕ ಅಲ್ಪಸಂಖ್ಯಾತರರಿಗೆ ಮೀಸಲಾತಿ ನೀಡುವ ಅವಕಾಶ ಇಲ್ಲ. ಆಂಧ್ರಪ್ರದೇಶ ಹೈ ಕೋರ್ಟ್ ಧಾರ್ಮಿಕ ಅಲ್ಪಸಂಖ್ಯಾತ ಮೀಸಲಾತಿಯನ್ನು ವಜಾ ಗೊಳಿಸಿತ್ತು. ಮುಸ್ಲಿಂ ಸಮುದಾಯದ ಕೆಲ ಉಪಜಾತಿಗಳು 2A ಯಡಿ, ಪ್ರವರ್ಗ 1ರಲ್ಲೂ ಮೀಸಲಾತಿಬಪಡೆಯುತ್ತಿದ್ದರು.

2Bಯಲ್ಲಿ ಸಂಪೂರ್ಣ 4% ಮುಸ್ಲಿಂರಿಗೆ ನೀಡಲಾಗುತ್ತಿರುವ ಮೀಸಲಾತಿಗೆ ಕತ್ತರಿ ಹಾಕಲಾಗಿದೆ. ಅದರಲ್ಲಿನ ಬಡ ಮುಸ್ಲಿಂಮರಿಗೆ EWSನಡಿ ಮೀಸಲಾತಿ ನೀಡಲಾಗುವುದು. ಹಾಗಾಗಿ ಮುಸ್ಲಿಮರಿಗೆ ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶ ನೀಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!