Connect with us

Hi, what are you looking for?

ರಾಜ್ಯ

ಇಂಥ ಪುಣ್ಯ ಭೂಮಿಗೆ ಬಂದಿದ್ದು ಸೌಭಾಗ್ಯ; ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

2

ಚಿಕ್ಕಬಳ್ಳಾಪುರ : ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂಧನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಅನಾವರಣ ಮಾಡಿ ಕನ್ನಡದಲ್ಲಿಯೇ ಮಾತು ಆರಂಭಿಸಿದರು.

ಕರ್ನಾಟಕ ಮಠ, ಆಶ್ರಮ ಹಾಗೂ ಸಂತರ ದೊಡ್ಡ ಪರಂಪರೆ ಇರುವಂಥ ರಾಜ್ಯ. ಯೋಗ, ಕರ್ಮ ಮತ್ತು ಕೌಶಲ ಈ ರಾಜ್ಯದ್ದು ಮಾತ್ರವಲ್ಲ ಸತ್ಯಸಾಯಿ ಆಶ್ರಮದ ಧ್ಯೇಯವೂ ಆಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಹಲವು ಸಂಶೋಧನೆಗಳು ನಡೆಯುತ್ತಿದೆ. 2014ಕ್ಕೂ ಮೊದಲು 380 ವೈದ್ಯಕೀಯ ಕಾಲೇಜುಗಳಿದ್ದವು. ಈಗ 600ಕ್ಕೂ ಅಧಿಕ ವೈದ್ಯಕೀಯ ಕಾಲೇಜುಗಳಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Advertisement. Scroll to continue reading.

ಚಿಕ್ಕಬಳ್ಳಾಪುರ ಸರ್‌ಎಂವಿ ಅವರ ಜನ್ಮಸ್ಥಳ. ಈಗ ತಾನೆ ನಾನು ಅವರ ಸಮಾಧಿ ಸ್ಥಳ ಹಾಗೂ ಮ್ಯೂಸಿಯಂಗೆ ಭೇಟಿ ನೀಡಿದ್ದೇನೆ. ಈ ಪುಣ್ಯಭೂಮಿಗೆ ತಲೆಬಾಗಿ ನಮಿಸುತ್ತೇನೆ. ರೈತರು ಹಾಗೂ ಸಾಮಾನ್ಯ ಜನರಿಗೆ ಅವರ ಇಂಜಿನಿಯರಿಂಗ್‌ ದೃಷ್ಟಿಕೋನವನ್ನು ನೀಡಿದರು. ಚಿಕ್ಕಬಳ್ಳಾಪುರ ಸೇವೆಯ ಅದ್ಭುತ ರೀತಿಯನ್ನು ದೇಶಕ್ಕೆ ತೋರಿದೆ. ಅದನ್ನು ಸತ್ಯಸಾಯಿ ಕೂಡ ಮುಂದುವರಿಸುತ್ತಿದೆ. ಈ ವೈದ್ಯಕೀಯ ಆಸ್ಪತ್ರೆ, ದೇಶಕ್ಕೆ ಇನ್ನಷ್ಟು ವೈದ್ಯರನ್ನು ಸೇವೆಗಾಗಿ ಸಿದ್ಧ ಮಾಡಲಿದೆ. ಇಲ್ಲಿನ ಎಲ್ಲರಿಗೂ ನಾನು ಈ ಕುರಿತಾಗಿ ಧನ್ಯವಾದ ಹೇಳುತ್ತೇನೆ ಎಂದರು.

ಕನ್ನಡ ದೇಶದ ಸಮೃದ್ಧಿ ಹಾಗೂ ಗೌರವ ಹೆಚ್ಚಿಸವ ಭಾಷೆ. ಹಿಂದೆಲ್ಲಾ ವೈದ್ಯಕೀಯ ಪರೀಕ್ಷೆಯನ್ನು ಇಂಗ್ಲೀಷ್‌ ಅಥವಾ ಹಿಂದಿ ಭಾಷೆಯಲ್ಲಿಯೇ ಬರೆಯಬೇಕಾಗಿತ್ತು. ಆದರೆ, ನಮ್ಮ ಸರ್ಕಾರ ಕನ್ನಡದೊಂದಿಗೆ ಪ್ರತಿ ರಾಜ್ಯದ ಭಾಷೆಯನ್ನೂ ಬರೆಯುವ ಅವಕಾಶ ಕಲ್ಪಿಸಿದೆ ಎಂದು ಹೇಳಿದರು. ಇಷ್ಟು ಸಣ್ಣ ಸಮಯದಲ್ಲಿ ಇಷ್ಟು ದೊಡ್ಡ ಆಸ್ಪತ್ರೆ ಕಟ್ಟಲು ಹೇಗೆ ಸಾಧ್ಯ? ಅಭಿವೃದ್ಧಿ ಹೇಗೆ ಸಾಧ್ಯ ಎಂದು ಕೇಳುವವರಿಗೆ ಒಂದೇ ಉತ್ತರ. ದೇಶದ ಜನರ ಪರಿಶ್ರಮ. ಎಲ್ಲರೂ ಪ್ರಯಾಸಪಟ್ಟರೆ, 2047ರ ವೇಳೆಗೆ ದೇಶ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಇರಲು ಸಾಧ್ಯವಾಗಲಿದೆ ಎಂದರು.

ನಾನು ಚಿಕ್ಕಬಳ್ಳಾಪುರಕ್ಕೆ ಮೂರನೇ ಬಾರಿ ಬರುತ್ತಿದ್ದೇನೆ. ಮೊದಲ ಬಾರಿಗೆ ಬಂದಾಗ ಮಧುಸೂಧನ್‌ ಸಾಯಿ ಅವರು ತೋರಿದ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ಕಳೆದ ಬಾರಿ ಬಂದಾಗ, ಮುಂದಿನ ಬಾರಿ ಮೋದಿ ಅವರಿಂದಲೇ ಈ ಆಸ್ಪತ್ರೆ ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದ್ದರು. ಅದನ್ನು ಮಾಡಿ ತೋರಿಸಿದ್ದಾರೆ. ಇಂದು ಆರೋಗ್ಯ ಸೇವೆ ಎಷ್ಟು ಕಷ್ಟವಿದೆ ಹಾಗೂ ಎಷ್ಟು ದುಬಾರಿ ಎನ್ನುವುದು ಎಲ್ಲರಿಗೂ ಗೊತ್ತಿದೆ. ಆಯುಷ್ಮಾನ್‌ ಭಾರತ್‌ ಕಾರ್ಡ್‌ ಗರಿಷ್ಠ ಸಂಖ್ಯೆಯಲ್ಲಿ ವಿತರಣೆ ಮಾಡಿದ ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದರು. ಆತ್ಮನಿರ್ಭರ ಭಾರತಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಿಲ್ಲ ಎಂದು ಹೇಳಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!