Connect with us

Hi, what are you looking for?

ಅಂತಾರಾಷ್ಟ್ರೀಯ

ಮೆಕ್ಕಾಗೆ ಹೋಗುತ್ತಿದ್ದ ಬಸ್ ಭೀಕರ ಅಪಘಾತ: 20 ಯಾತ್ರಿಕರು ಸಾವು, ಹಲವರಿಗೆ ಗಾಯ

1

ರಿಯಾದ್ : ಪವಿತ್ರ ನಗರವಾದ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುಯ್ಯುತ್ತಿದ್ದ ಬಸ್ ಸೋಮವಾರ ಸೇತುವೆಯ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ 20 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆ ದಕ್ಷಿಣ ಪ್ರಾಂತ್ಯದ ಅಸಿರ್‌ನಲ್ಲಿ ನಡೆದಿದೆ.

ಇದು ರಂಜಾನ್‌ನ ಮೊದಲ ವಾರವಾಗಿರುವುದರಿಂದ ಲಕ್ಷಾಂತರ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಇದೀಗ ಸಂಭವಿಸಿರುವ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವವರಲ್ಲಿ ಹಲವರು ಬೇರೆ ಬೇರೆ ದೇಶಗಳಿಂದ ಬಂದಿರುವವರು ಎಂಬುದು ತಿಳಿದುಬಂದಿದೆ.

Advertisement. Scroll to continue reading.

ವರದಿಗಳ ಪ್ರಕಾರ ಬಸ್ ಸೇತುವೆಯಲ್ಲಿ ಹೋಗುತ್ತಿದ್ದಾಗ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ವೇಳೆ ಭಾರೀ ಬೆಂಕಿ ಸಂಭವಿಸಿದ್ದು, ಜನರ ಸಾವಿಗೆ ಕಾರಣವಾಗಿದೆ. 2019ರ ಅಕ್ಟೋಬರ್‌ನಲ್ಲೂ ಇಂತಹುದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿತ್ತು. ಮದೀನಾ ಬಳಿ ದೊಡ್ಡ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು, ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು. 

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!