Connect with us

Hi, what are you looking for?

ಕ್ರೀಡೆ

WATCH VIDEO : IPL 2023 : ಐಪಿಎಲ್‌ಗೆ ಅದ್ಧೂರಿ ಚಾಲನೆ; ತಾರಾ ಮೆರುಗು

3

ಅಹಮದಾಬಾದ್ : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ 16ನೇ ಆವೃತ್ತಿಗೆ ಅದ್ಧೂರಿ ಆರಂಭ ಸಿಕ್ಕಿದೆ. ಇಂದಿನ ಮೊದಲ ಪಂದ್ಯಕ್ಕೂ ಮುನ್ನ ಭರ್ಜರಿ ಮನರಂಜನಾ ಕಾರ್ಯಕ್ರಮಗಳು ನಡೆದವು.

ಅರ್ಜಿತ್ ಸಿಂಗ್, ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ಕಾರ್ಯಕ್ರಮದಲ್ಲಿ ಮನರಂಜನೆ ನೀಡಿದರು. ಇನ್ನು ಎರಡು ತಿಂಗಳು ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆಯ ಮಹಾಪೂರವೇ ಹರಿಯಲಿದೆ.

ಮನರಂಜನಾ ಕಾರ್ಯಕ್ರಮದಲ್ಲಿ ಅರ್ಜಿತ್ ಸಿಂಗ್ ಬಾಲಿವುಡ್ ಇತ್ತೀಚಿನ ಸಿನಿಮಾಗಳಾದ ಪಠಾಣ್, ಬ್ರಹ್ಮಾಸ್ತ್ರ ಮತ್ತ ತು ಜುಟಿ ಮೇ ಮಕ್ಕರ್ ಚಿತ್ರ ಹಾಡುಗಳನ್ನು ಹಾಡಿದರು. ತಮನ್ನಾ ಭಾಟಿಯಾ ಟುಮ್ ಟುಮ್ ಹಾಡಿಗೆ, ಮಂದಣ್ಣ ನಾಟು ನಾಟು ಹಾಡಿಗೆ ನೃತ್ಯ ಮಾಡಿದರು. ಮಂದಿರಾ ಬೇಡಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement. Scroll to continue reading.

40 ನಿಮಿಷದ ಮನರಂಜನಾ ಕಾರ್ಯಕ್ರಮದ ನಂತರ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಶಾ ಮತ್ತು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ವೇದಿಕೆಗೆ ಬಂದು ಅರ್ಜಿತ್​ ಸಿಂಗ್​, ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ಅವರಿಗೆ ಧನ್ಯವಾದ ಸಮರ್ಪಿಸಿದರು. ಇದೇ ವೇಳೆ ಉಭಯ ತಂಡದ ನಾಯಕರನ್ನು ತೆರೆದ ವಾಹನದಲ್ಲಿ ವೇದಿಕೆಗೆ ಕರೆಸಿ ಮೊದಲ ಪಂದ್ಯಕ್ಕೆ ನಾಯಕರಿಗೆ ಶುಭ ಹಾರೈಸಲಾಯಿತು.

ಈ ವೇಳೆ ಉಭಯ ತಂಡದ ನಾಯಕರನ್ನು ತೆರೆದ ವಾಹನದಲ್ಲಿ ವೇದಿಕೆಗೆ ಕರೆಸಿ ಮೊದಲ ಪಂದ್ಯಕ್ಕೆ ನಾಯಕರಿಗೆ ಶುಭ ಹಾರೈಸಿದರು.

ಟಾಸ್ ಗೆದ್ದ ಟೈಟನ್ಸ್: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯ ತಂಡಗಳ ನಡುವೆ ಈ ಆವೃತ್ತಿಯ ಮೊದಲ ಪಂದ್ಯ ಏರ್ಪಟ್ಟಿದೆ. ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...