Connect with us

Hi, what are you looking for?

ಅಂತಾರಾಷ್ಟ್ರೀಯ

ನಾಸಾದ ‘ಮೂನ್ ಟು ಮಾರ್ಸ್’ ಮುಖ್ಯಸ್ಥರಾಗಿ ಭಾರತ ಮೂಲದ ಅಮಿತ್ ಕ್ಷತ್ರಿಯ ಆಯ್ಕೆ

1

ವಾಷಿಂಗ್ಟನ್ : ನಾಸಾದ ‘ಮೂನ್ ಟು ಮಾರ್ಸ್’ ಕಾರ್ಯಕ್ರಮದ ಮುಖ್ಯಸ್ಥರನ್ನಾಗಿ ಭಾರತೀಯ ಮೂಲದ ಸಾಫ್ಟ್‌ವೇರ್ ಮತ್ತು ರೊಬೊಟಿಕ್ಸ್ ಎಂಜಿನಿಯರ್ ಅಮಿತ್ ಕ್ಷತ್ರಿಯ ಅವರನ್ನು ನೇಮಕ ಮಾಡಲಾಗಿದೆ. ಇತ್ತೀಚೆಗೆ ಈ ಕಾರ್ಯಕ್ರಮವನ್ನು ನಾಸಾ ಆರಂಭಿಸಿದ್ದು, ತಕ್ಷಣಕ್ಕೆ ಜಾರಿಗೆ ಬರುವಂತೆ ಕ್ಷತ್ರಿಯ ಈ ಜವಾಬ್ದಾರಿಯನ್ನ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಮಾನವೀಯತೆಯ ಸುಧಾರಣೆಗಾಗಿ ಚಂದ್ರ ಮತ್ತು ಮಂಗಳದ ಅನ್ವೇಷಣೆ ಕಾರ್ಯಕ್ರಮವನ್ನ ಪೂರ್ಣಗೊಳಿಸುವುದು ಈ ಹೊಸ ಕಾರ್ಯಾಚರಣೆಯ ಉದ್ದೇಶವಾಗಿದೆ ಎಂದು ನಾಸಾ ಇತ್ತೀಚೆಗೆ ಹೇಳಿದೆ. ಇನ್ನು ಮಂಗಳ ಗ್ರಹಕ್ಕೆ ಮನುಷ್ಯರನ್ನ ಕಳುಹಿಸಲು ಸಿದ್ಧತೆ ನಡೆಸಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ.

ಮಂಗಳ ಗ್ರಹಕ್ಕೆ ಮಾನವೀಯತೆಯ ಮುಂದಿನ ದೊಡ್ಡ ಜಿಗಿತಕ್ಕೆ ತಯಾರಾಗಲು ಅಗತ್ಯವಾದ ಕಾರ್ಯಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಕಾರ್ಯಕ್ರಮವು ಸಹಾಯ ಮಾಡುತ್ತದೆ ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. ಈ ಕಾರ್ಯಕ್ರಮವು ಚಂದ್ರನಿಗೆ ಪ್ರಮುಖ ಕಾರ್ಯಾಚರಣೆಗಳನ್ನು ಕಳುಹಿಸಲು ಸಹಕಾರಿಯಾಗಲಿದೆ.

Advertisement. Scroll to continue reading.

ಅಲ್ಲದೆ, ಮಂಗಳ ಗ್ರಹಕ್ಕೆ ಮೊದಲ ಮನುಷ್ಯನನ್ನು ಕಳುಹಿಸುವ ಸಿದ್ಧತೆಗೆ ಇದು ಸಹಕಾರಿಯಾಗಲಿದೆ. ಸಂಬಂಧಿತ ಕಚೇರಿಯು ಈ ಕಾರ್ಯಾಚರಣೆಗಳಿಗಾಗಿ ಹಾರ್ಡ್‌ವೇರ್ ಮತ್ತು ಅಪಾಯ ನಿರ್ವಹಣೆಯನ್ನು ಅಭಿವೃದ್ಧಿಪಡಿಸುವಲ್ಲಿ ಕೆಲಸ ಮಾಡುತ್ತದೆ. ಈ ಕಛೇರಿಯು ಕಾರ್ಯಾಚರಣೆಯ ಯೋಜನೆ ಮತ್ತು ವಿಶ್ಲೇಷಣೆಯನ್ನು ನಿರ್ವಹಿಸುತ್ತದೆ.

ಯಾರು ಅಮಿತ್ ಕ್ಷತ್ರಿಯ ? :


ಅಮಿತ್ ಕ್ಷತ್ರಿಯ ಅವರು 2003ರಲ್ಲಿ ಬಾಹ್ಯಾಕಾಶ ಕಾರ್ಯಕ್ರಮ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ಸಾಫ್ಟ್‌ವೇರ್ ಮತ್ತು ರೊಬೊಟಿಕ್ಸ್ ಎಂಜಿನಿಯರ್ ಆಗಿ ಅಲ್ಲಿ ಕೆಲಸ ಮಾಡುತ್ತಿದ್ದರು. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ರೊಬೊಟಿಕ್ಸ್ ಜೋಡಿಸುವುದು ಅವರ ಮುಖ್ಯ ಕಾರ್ಯವಾಗಿದೆ. 2014 ರಿಂದ 2017 ರವರೆಗೆ ಅಮಿತ್ ಅವರು ಬಾಹ್ಯಾಕಾಶ ನಿಲ್ದಾಣದ ಫ್ಲೈಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದರು. ಈ ಸಮಯದಲ್ಲಿ, ಅವರು ಅಂತಾರಾಷ್ಟ್ರೀಯ ಗಗನಯಾತ್ರಿಗಳ ತಂಡದ ಕಾರ್ಯಾಚರಣೆಗಳು ಮತ್ತು ವಿಮಾನಗಳನ್ನು ನಿರ್ವಹಿಸಿದರು.


ಅಮಿತ್ ಕ್ಷತ್ರಿಯ ಅವರು ಟೆಕ್ಸಾಸ್ ವಿಶ್ವವಿದ್ಯಾಲಯದಿಂದ ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವ್ರು ನಾಸಾದ ಅತ್ಯುತ್ತಮ ನಾಯಕತ್ವದ ಪದಕವನ್ನೂ ಪಡೆದಿದ್ದಾರೆ. ಗಗನಯಾತ್ರಿಗಳನ್ನ ಬಾಹ್ಯಾಕಾಶ ನಿಲ್ದಾಣಕ್ಕೆ ಯಶಸ್ವಿಯಾಗಿ ಹೊತ್ತೊಯ್ದು ಸುರಕ್ಷಿತವಾಗಿ ಕರೆತಂದ ಅಮಿತ್ ಅವರಿಗೆ ಸಿಲ್ವರ್ ಸ್ನೂಪಿ ಪ್ರಶಸ್ತಿ ಕೂಡ ಲಭಿಸಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!