Connect with us

Hi, what are you looking for?

ರಾಷ್ಟ್ರೀಯ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

2

ನ್ಯೂಯಾರ್ಕ್:  ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನೀಲಿಚಿತ್ರ ತಾರೆ( ಪೊರ್ನ್ ಸ್ಟಾರ್) ಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್‌ ಪ್ರಕರಣದ ಸಂಬಂಧ ಬಂಧಿಸಲಾಗಿದೆ.

ಇದಕ್ಕೂ ಮುನ್ನ ಮ್ಯಾನ್‌ಹಾಟನ್‌ ಜಿಲ್ಲಾ ಅಟಾರ್ನಿಯ ಕೋರ್ಟ್‌ ಸಭಾಂಗಣದಲ್ಲಿ ಟ್ರಂಪ್‌ ಶರಣಾದರು. ಬಳಿಕ ಅವರನ್ನು ಬಂಧಿಸಿ ಬಿಗಿ ಭದ್ರತೆಯಲ್ಲಿ ವಿಚಾರಣೆಗೆ ಕರೆದುಕೊಂಡು ಹೋಗಲಾಯಿತು ಎಂದು ಬಿಬಿಸಿ ವರದಿ ಮಾಡಿದೆ.

ನ್ಯಾಯಾಲಯದಲ್ಲಿ ಡೊನಾಲ್ಡ್ ಟ್ರಂಪ್ ತಮ್ಮನ್ನು ತಾವು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ. ಟ್ರಂಪ್ ತಪ್ಪೊಪ್ಪಿಕೊಂಡಿಲ್ಲ. ಟ್ರಂಪ್ ಆಗಮಿಸುವ ಮುನ್ನ ನ್ಯಾಯಾಲಯದ ಬಳಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಎಂಟು ಕಾರುಗಳ ಬೆಂಗಾವಲು ಪಡೆಯಲ್ಲಿ ಟ್ರಂಪ್ ಕೋರ್ಟ್ ತಲುಪಿದರು.

Advertisement. Scroll to continue reading.

ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್‌ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ, ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್‌ ಆಗಿದ್ದಾರೆ. 

‘ನಮ್ಮ ನಡುವಿನ ಅನೈತಿಕ ಸಂಬಂಧ ಬಹಿರಂಗಪಡಿಸಬಾರದು’ ಎಂದು ನೀಲಿಚಿತ್ರ ತಾರೆಯೊಬ್ಬರಿಗೆ ಹಣ ಸಂದಾಯ ಮಾಡಿದ್ದ ಕುರಿತಂತೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

‘ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್‌ ಅವರು, ಕ್ರಿಮಿನಲ್‌ ಆರೋಪ ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ನಾನು ನಿರ್ದೋಷಿ’ ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜುವಾನ್ ಮರ್ಚನ್ ಅವರಿಗೆ ಮನವಿ ಸಲ್ಲಿಸಿದರು.

ಟ್ರಂಪ್‌ 2024ರ ಅಧ್ಯಕ್ಷೀಯ ಚುನಾವಣೆ ಸಿದ್ಧತೆಯಲ್ಲಿದ್ದು, ಎರಡನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಹೀಗಾಗಿ, ಈ ಬೆಳವಣಿಗೆ ಅಮೆರಿಕದಲ್ಲಿ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳಿವೆ.

Advertisement. Scroll to continue reading.

ಇನ್ನು ವಶಕ್ಕೆ ಪಡೆದ ಪೊಲೀಸರು, ಕೋರ್ಟ್‌ ಹಾಲ್‌ಗೆ ಕರೆದೊಯ್ಯುವ ಮೊದಲು ಟ್ರಂಪ್‌ ಅವರ ಬೆರಳಚ್ಚುಗಳ ಮಾದರಿ ಪಡೆದರು. ಹೆಸರು, ವಯಸ್ಸು, ಎತ್ತರ, ತೂಕ ಒಳಗೊಂಡಂತೆ ವ್ಯಕ್ತಿಗತ ಮಾಹಿತಿ ಪಡೆದಿದ್ದು, ಜೊತೆಗೆ ಅವರ ವಿರುದ್ಧ ಯಾವುದಾದರೂ ವಾರಂಟ್ ಬಾಕಿ ಇದೆಯೇ ಎಂದು ಪರಿಶೀಲಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!