ತೆಲಂಗಾಣ : ತಮ್ಮ ಮೂರು ತಿಂಗಳ ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಹೈದರಾಬಾದ್ ಸಮೀಪದ ಚೆವೆಲ್ಲಾ ಮಂಡಲದ ದೇವರಪಲ್ಲಿ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.
ಅಶೋಕ್ (30), ಅಂಕಿತಾ (20) ತಮ್ಮ 3 ತಿಂಗಳ ಮಗುವಿಗೆ ನೇಣು ಹಾಕಿ, ಬಳಿಕ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಗುವನ್ನು ನೇಣು ಹಾಕುವ ಮುನ್ನ ಅಶೋಕ್ ಫುಲ್ ವಾಲ್ಯೂಮ್ನೊಂದಿಗೆ ಟಿವಿ ಆನ್ ಮಾಡಿದ್ದರು. ಬಳಿಕ ದಂಪತಿ ನೇಣು ಬಿಗಿದುಕೊಂಡಿದ್ದಾರೆ. ಟಿವಿಯ ಶಬ್ದದಿಂದ ವಿಚಲಿತರಾದ ನೆರೆಹೊರೆಯವರು ಬಾಗಿಲು ತಟ್ಟಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಬಾಗಿಲು ಒಡೆದು ನೋಡಿದಾಗ ಮಗು ಮತ್ತು ಅಂಕಿತಾ ಮೃತಪಟ್ಟಿರುವುದು ಕಂಡು ಬಂದಿದೆ. ಅಶೋಕ್ ಇನ್ನೂ ಉಸಿರಾಡುತ್ತಿದ್ದರಿಂದ, ಅವರು ಅವನನ್ನು ಕೆಳಕ್ಕೆ ಇಳಿಸಿದರು. ಆದರೆ, ಕೆಲವು ನಿಮಿಷಗಳ ಬಳಿಕ ಆತನೂ ಸಾವನ್ನಪ್ಪಿದ್ದಾನೆ.
ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚೇವೆಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

