Connect with us

Hi, what are you looking for?

ಅಂತಾರಾಷ್ಟ್ರೀಯ

500 ವರ್ಷ ಪುರಾತನ ಹನುಮಾನ್ ಪ್ರತಿಮೆ ಭಾರತಕ್ಕೆ ಹಿಂದಿರುಗಿಸಿದ ಆಸ್ಟ್ರೇಲಿಯಾ

1

ತಮಿಳುನಾಡಿನ ದೇವಸ್ಥಾನದಿಂದ ಕಳುವಾಗಿದ್ದ 500 ವರ್ಷಗಳಷ್ಟು ಪುರಾತನ ಹನುಮಾನ ವಿಗ್ರಹವನ್ನು ಆಸ್ಟ್ರೇಲಿಯಾ ಭಾರತಕ್ಕೆ ಹಿಂದಿರುಗಿಸಿದೆ. ಆಸ್ಟ್ರೇಲಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವ ಜಿ.ಕಿಶನ್ ರೆಡ್ಡಿ ಟ್ವೀಟ್ ಮಾಡಿದ್ದಾರೆ.

ದೇಶದ ಎಲ್ಲಾ ಅಮೂಲ್ಯ ವಸ್ತುಗಳನ್ನ ಮರಳಿ ತರಲು ಭಾರತ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ್ದು, ಈ ಟ್ವೀಟ್‌ನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಟ್ಯಾಗ್ ಮಾಡಿದ್ದಾರೆ.

14-15ನೇ ಶತಮಾನದಲ್ಲಿ ಚೋಳರ ಕಾಲದಲ್ಲಿ ವಿಷ್ಣು ದೇವಾಲಯದಿಂದ ಹನುಮಂತನ ಲೋಹದ ವಿಗ್ರಹವನ್ನ ಕಳವು ಮಾಡಲಾಗಿತ್ತು. ಇದುವರೆಗೆ ವಿವಿಧ ದೇಶಗಳಿಂದ 251 ಪುರಾತನ ವಸ್ತುಗಳನ್ನ ಪಡೆಯಲಾಗಿದೆ ಎಂದು ತಿಳಿಸಿದರು. ನಮ್ಮ ಅಮೂಲ್ಯ ಪರಂಪರೆಯನ್ನು ಮನೆಗೆ ಮರಳಿ ತರಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

ತಮಿಳುನಾಡಿನ ಅರಿಯಲೂರು ಜಿಲ್ಲೆಯ ಪೊಟ್ಟವೆಲ್ಲಿ ವೆಲ್ಲೂರು ಪ್ರದೇಶದಲ್ಲಿರುವ ಶ್ರೀವರತರಾಜ ಪೆರುಮಾಳ್ ಎಂಬ ವಿಷ್ಣು ದೇವಾಲಯದಿಂದ ವಿಗ್ರಹವನ್ನ ಕಳವು ಮಾಡಲಾಗಿದೆ. ಇದನ್ನ 1961ರಲ್ಲಿ ಆಗಿನ ಫ್ರೆಂಚ್ ಇನ್ಸ್ಟಿಟ್ಯೂಟ್ ಆಫ್ ಪಾಂಡಿಚೇರಿ ದಾಖಲಿಸಿದೆ. ವಿಗ್ರಹವನ್ನು ಫೆಬ್ರವರಿ ಕೊನೆಯ ವಾರದಲ್ಲಿ ಭಾರತಕ್ಕೆ ಹಿಂತಿರುಗಿಸಲಾಯಿತು ಮತ್ತು ಏಪ್ರಿಲ್ 18ರಂದು ತಮಿಳುನಾಡು ಐಡಲ್ ವಿಂಗ್‌ಗೆ ಪ್ರಕರಣದ ಆಸ್ತಿಯಾಗಿ ಹಸ್ತಾಂತರಿಸಲಾಯಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!