Connect with us

Hi, what are you looking for?

ಕ್ರೀಡೆ

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌; ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ‘ಸಾತ್ವಿಕ್-ಚಿರಾಗ್’

1

ದುಬೈನಲ್ಲಿ ಭಾನುವಾರ ನಡೆದ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾರತದ ಅಗ್ರಮಾನ್ಯ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮಲೇಷ್ಯಾದ ಒಂಗ್ ಯೆವ್ ಸಿನ್ ಮತ್ತು ಟಿಯೋ ಈ ಯಿ ಅವರನ್ನು 16-21, 21-17, 21-19 ಸೆಟ್‌ಗಳಿಂದ ಸೋಲಿಸಿ ಚಿನ್ನ ಗೆದ್ದಿದ್ದಾರೆ. ಈ ಮೂಲಕ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಸಾತ್ವಿಕ್-ಚಿರಾಗ್ 1965ರಲ್ಲಿ ದಿನೇಶ್ ಖನ್ನಾ ನಂತರ ಕಾಂಟಿನೆಂಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಪುರುಷರ ಡಬಲ್ಸ್ ವಿಭಾಗದಲ್ಲಿ 52 ವರ್ಷಗಳ ನಂತ್ರ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ನಲ್ಲಿ ಇಂಡೋನೇಷ್ಯಾದ ಅನುಭವಿ ಜೋಡಿ ಮೊಹಮ್ಮದ್ ಅಹ್ಸಾನ್ ಮತ್ತು ಹೆಂದ್ರಾ ಸೆಟಿಯಾವಾನ್ ಅವರನ್ನ 21-11, 21-12 ನೇರ ಗೇಮ್ಗಳಲ್ಲಿ ಸೋಲಿಸುವ ಮೂಲಕ ಪದಕ ಖಚಿತಪಡಿಸಿಕೊಂಡಿತು.

ಅಂದ್ಹಾಗೆ, ಸಾತ್ವಿಕ್ ಮತ್ತು ಚಿರಾಗ್ ಈ ಮೆಗಾ ಈವೆಂಟ್ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನ ಗೆದ್ದರು. ದಿನೇಶ್ ಖನ್ನಾ ಚಿನ್ನದ ಪದಕ ಗೆದ್ದ ಹೊರತಾಗಿ, 1962 ರಿಂದ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್‌ನಲ್ಲಿ ಭಾರತವು ವಿವಿಧ ವಿಭಾಗಗಳಲ್ಲಿ 17 ಕಂಚಿನ ಪದಕಗಳನ್ನ ಗೆದ್ದಿದೆ.

Advertisement. Scroll to continue reading.

ಟೋಕಿಯೊದಲ್ಲಿ ನಡೆದ 2022 ರ ವಿಶ್ವ ಚಾಂಪಿಯನ್ ಶಿಪ್‌ನಲ್ಲಿ ಪುರುಷರ ಡಬಲ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಸಾತ್ವಿಕ್ ಮತ್ತು ಚಿರಾಗ್, ಏಷ್ಯನ್ ಟೀಮ್ ಚಾಂಪಿಯನ್ ಶಿಪ್‌ನಲ್ಲಿ (2016, 2020) ಎರಡು ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...