Connect with us

Hi, what are you looking for?

ಕರಾವಳಿ

ಉಡುಪಿ: ಮಾದಕ ವಸ್ತು ಸೇವನೆ – ಐವರು ವಶ ,ದೂರು ದಾಖಲು

0



ಉಡುಪಿ : ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿಯನ್ನು ವಶಕ್ಕೆ ಪಡೆದು ಕೊಂಡಿರುವ ಪೊಲೀಸರು ಜಿಲ್ಲೆಯ ವಿವಿಧ ಠಾಣೆಯಲ್ಲಿ 5 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಠಾಣಾ ಪೊಲೀಸರು ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿಧ್ಯಾರತ್ನ ನಗರದ ಎಂ ಪಿ ಪಾರ್ಕ್ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಹರ್ಷವರ್ಧನ್‌ ಮಿಶ್ರಾ (21), ಅದ್ವಿಕ್ (20) ಎಂಬ ಇಬ್ಬರನ್ನು ಮತ್ತು ಶಿವಳ್ಳಿ ಗ್ರಾಮದ ಮಣಿಪಾಲದ ಮಾಂಡವಿ ಎಮ್ರಾಡ್‌ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಸಾಹಿಲ್‌ ಬಶೀರ್(21), ಅಬ್ದುಲ್‌ (21) ಎಂಬಿಬ್ಬರನ್ನು ಹಾಗೂ ಬೈಂದೂರು ಠಾಣಾ ಪೊಲೀಸರು ಠಾಣಾ ವ್ಯಾಪ್ತಿಯ ಯಡ್ತರೆ ಗ್ರಾಮದ ನ್ಯೂ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗುರುರಾಜ ಪೂಜಾರಿ ಎಂಬಾತನನ್ನು ಮಾಧಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಇವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿರುವುದಾಗಿ ವೈದ್ಯರು ವರದಿ ನೀಡಿದ್ದಾರೆ.

ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ 4 ಹಾಗೂ ಬೈಂದೂರು ಠಾಣೆಯಲ್ಲಿ ಒಂದು ಸೇರಿ ಒಟ್ಟು 5 ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like