Connect with us

Hi, what are you looking for?

ಕರಾವಳಿ

ಕುಸ್ತಿ ಪಟುಗಳಿಗೆ ದೌರ್ಜನ್ಯ: ಕುಂದಾಪುರದಲ್ಲಿ ಪ್ರತಿಭಟನೆ

0

ವರದಿ: ದಿನೇಶ್ ರಾಯಪ್ಪನಮಠ

ಕುಂದಾಪುರ: ಮಹಿಳ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ ಸಿಂಗ್ ನನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ದೇಶವ್ಯಾಪಿ ಕಿಸಾನ್ ಸಂಯುಕ್ತ ಮೋರ್ಚಾ ನೀಡಿದ ಕರೆಯ ಮೇರೆಗೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಲಿಂಪಿಕ್ಸ್ ಹಾಗೂ ಕಾಮನ್ವೆಲ್ತ್ ಗಳಲ್ಲಿ ಸ್ಪರ್ಧಿಸಿ ಚಿನ್ನ ಹಾಗೂ ಅತ್ಯುನ್ನತ ಪ್ರಶಸ್ತಿ ಪಡೆದವರು ಇಂದು ನ್ಯಾಯಕ್ಕಾಗಿ ಬೀದಿಯಲ್ಲಿರುವುದು ದೇಶ ತಲೆತಗ್ಗಿಸುವಂತೆ ಮಾಡಿದೆ.
ಸುಮಾರು ನಲವತ್ತಕ್ಕೂ ಹೆಚ್ಚು ಗಂಭೀರ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ನ ಮೇಲೆ ಪೋಕ್ಸೋ ಕಾಯ್ದೆ ಇದ್ದರೂ ಕೇಂದ್ರ ಸರಕಾರ ರಕ್ಷಣೆ ಮಾಡುತ್ತಿರುವುದು ದೇಶದ ಕಾನೂನಿನ ಅಣಕವಾಗಿದೆ.
ನ್ಯಾಯ ಕೇಳುತ್ತಿರುವ ಪ್ರತಿಭಟನಕಾರರ ಮೇಲೆಯೇ ಪ್ರಕರಣ ದಾಖಲಿಸಿರುವುದು ಖಂಡನೀಯ.ಬಿಜೆಪಿಯ ಐಟಿ ಸೀಲ್ ನ್ಯಾಯ ಕೇಳುತ್ತಿರುವವರ ವಿರುದ್ಧ ಅಪಪ್ರಚಾರಗಳನ್ನು ಹರಿಯಬಿಟ್ಟು ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಮಹಿಳೆಯರನ್ನು ಹೀನಾಯವಾಗಿ ಕಾಣುವ ಮನಸ್ಥಿತಿ ಇರುವ ಬಿಜೆಪಿ-ಆರ್ ಎಸ್ಎಸ್ “ಬೋಲೋ ಭಾರತ್ ಮಾತಾಕಿ” ಎಂದು ಘೋಷಣೆ ಕೂಗುವ ನೈತಿಕತೆ ಇಲ್ಲ.ದೇಶದಲ್ಲಿ ಮಹಿಳೆಯರ ಮೇಲೆ ಅತೀ ಹೆಚ್ಚು ದೌರ್ಜನ್ಯ ನಡೆಸಿದ ಪಕ್ಷವೆಂದರೆ ಅದು ಬಿಜೆಪಿ ಎಂಬುವುದು ಈ ವಿಚಾರದಲ್ಲಿಯೂ ಸಾಬೀತಾಗಿದೆ ಎಂದರು.
ರೈತ ಮುಖಂಡ ಚಂದ್ರಶೇಖರ ಮಾತನಾಡಿ; ಮಹಿಳೆಯರ ಮೇಲಿನ ಲೈಂಗಿಕ ಕಿರುಕಳ ಸಂತ್ರಸ್ತರಿಗೆ ನ್ಯಾಯ ಸಿಗುವವರೆಗೂ ತೀವ್ರ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದೆ ಹೋರಾಟ ಮುನ್ನೆಡೆಸೋಣ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡ ಎಚ್ ನರಸಿಂಹ ಮಾತನಾಡಿದರು.
ಪ್ರತಿಭಟನೆಯಲ್ಲಿ ಸಿಐಟಿಯು,ರೈತ ಸಂಘ, ಜನವಾದಿ ಮಹಿಳಾ ಸಂಘಟನೆ, ಡಿವೈಎಫ್ಐ,ದಲಿತ ಹಕ್ಕುಗಳ ಸಮಿತಿ,ಕ್ರಷಿಕೂಲಿಕಾರರ ಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.ಕೆ.ಶಂಕರ್ ಮಹಾಬಲ ವಡೇರಹೋಬಳಿ, ಬಲ್ಕೀಸ್, ಶೀಲಾವತಿ, ನಾಗರತ್ನ ಕುಂದಾಪುರ, ರಾಜು ದೇವಾಡಿಗ, ರಮೇಶ್ ವಿ, ಸಂತೋಷ ಹೆಮ್ಮಾಡಿ ಇದ್ದರು.ರಮೇಶ್ ಗುಲ್ವಾಡಿ ಕಾರ್ಯಕ್ರಮ ನಿರೂಪಿಸಿದರು.ರಾಜೇಶ್ ವಡೇರಹೋಬಳಿ ವಂದಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು...

ಅಚ್ಚರಿ ಸುದ್ದಿ

1 ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತವೆ. ಕೆಲವೊಂದು ವೀಡಿಯೋಗಳು ನಗು ತರಿಸಿದ್ರೆ, ಇನ್ನು ಕೆಲವೊಂದು ಕಣ್ಣೀರು ತರಿಸುತ್ವೆ. ಇದೀಗ ವೈರಲ್ ಆಗಿರೋ ವೀಡಿಯೋ...

ಕರಾವಳಿ

0 ಕುಂದಾಪುರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಹಂಗಳೂರು ಇವರ ಆಶ್ರಯದಲ್ಲಿ ಕೋಡಿ ಮತ್ತು ಹಂಗಳೂರು ಗ್ರಾಮ ಮಟ್ಟದ...

ಕರಾವಳಿ

2 ವರದಿ : ಬಿ.ಎಸ್‌.ಆಚಾರ್ಯ ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಂದಾಡಿ ಲಕ್ಷ್ಮೀ ಪ್ರಸಾದ್ ನಾಯಕ್‌ ಅವರು ಬೆಂಗಳೂರು ದಕ್ಷಿಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಯಿಸುತ್ತರುವ ಇವರ ಬಹುಮುಖ...