Connect with us

Hi, what are you looking for?

ಅಂತಾರಾಷ್ಟ್ರೀಯ

ಬೈಕ್‌ ಖರೀದಿಸಲು ಪೋಷಕರು ನಿರಾಕರಿಸಿದ್ದಕ್ಕೆ ಮನೆಯನ್ನೇ ಮಾರಾಟ ಮಾಡಿದ 18ರ ಹುಡುಗ!

1

ಹುಡುಗ 59 ಲಕ್ಷಕ್ಕೆ ಮನೆಯನ್ನು ಮಾರಿದ್ದ. ಅದನ್ನು ಖರೀದಿದ್ದ ಏಜೆಂಟ್‌ ಲಾಭಕ್ಕಾಗಿ ಹೆಚ್ಚಿನ ಮೊತ್ತಕ್ಕೆ ಮಾರಾಟ ಮಾಡಿದ್ದ. ಈ ವಿಚಾರ ತಿಳಿದ ಹುಡುಗನ ತಾಯಿ, ಆಸ್ತಿ ಏಜೆಂಟ್‌ನ್ನು ಸಂಪರ್ಕಿಸಿ ಒಪ್ಪಂದವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಅದಕ್ಕೆ ಏಜೆಂಟ್ ನಿರಾಕರಿಸಿದಾಗ, ಪೋಷಕರು ಕಾನೂನು ಮಾರ್ಗ‌ ಹಿಡಿದರು.

ಬೀಜಿಂಗ್‌ : ಪೋಷಕರು ಬೈಕ್‌ ಖರೀದಿಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ 18 ವಯಸ್ಸಿನ ಹುಡುಗ ಮನೆಯನ್ನೇ ಮಾರಾಟ ಮಾಡಿರುವ ಘಟನೆ ಚೀನಾದಲ್ಲಿ ನಡೆದಿದೆ.

ಮಧ್ಯ ಚೀನಾದ ಹೆನಾನ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ.

ಸುಮಾರು 1.15 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅರ್ಧ ಬೆಲೆಗೆ ಮಾರಾಟ ಮಾಡಿದ್ದಾನೆ. ಈತನಿಗೆ ಇನ್ನೂ 18 ವರ್ಷ ವಯಸ್ಸಾಗಿರುವುದರಿಂದ ಕುಟುಂಬದ ಕಾನೂನು ಕ್ರಮವು ಮಾರಾಟವನ್ನು ರದ್ದುಗೊಳಿಸಿದೆ.

Advertisement. Scroll to continue reading.

ಏಜೆಂಟ್ ಮೂಲಕ ಮಾರಾಟ :

ಪೋಷಕರು ಬೈಕ್ ಖರೀದಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅಜ್ಜನಿಂದ ಪಿತ್ರಾರ್ಜಿತವಾಗಿ ಬಂದ ಆಸ್ತಿಯನ್ನು ಮಾರಾಟ ಮಾಡಲು ಹುಡುಗ ನಿರ್ಧರಿಸಿದ್ದ. ಪೋಷಕರಿಗೆ ತಿಳಿಸದೆ ಆಸ್ತಿ ಏಜೆಂಟರನ್ನು ಸಂಪರ್ಕಿಸಿದ್ದ. ಹುಡುಗ ಮತ್ತು ಇಬ್ಬರು ಆಸ್ತಿ ವಿತರಕರ ನಡುವಿನ ಒಪ್ಪಂದದ ಪೇಪರ್‌ಗಳನ್ನು ನ್ಯಾಯಾಲಯವು ಪರಿಶೀಲಿಸಿತು. ಇದು ಒಪ್ಪತಕ್ಕದ್ದಲ್ಲ ಎಂದು ಕೋರ್ಟ್‌ ಹೇಳಿದೆ.

ಕಾನೂನು ಮಾರ್ಗ ಹಿಡಿದ ಪೋಷಕರು :

ಹುಡುಗ 59 ಲಕ್ಷಕ್ಕೆ ಮನೆಯನ್ನು ಮಾರಿದ್ದ. ಅದನ್ನು ಖರೀದಿದ್ದ ಏಜೆಂಟ್‌ ಲಾಭಕ್ಕಾಗಿ ಹೆಚ್ಚಿನ ಮೊತ್ತಕ್ಕೆ ಮಾರಾಟ ಮಾಡಿದ್ದ. ಈ ವಿಚಾರ ತಿಳಿದ ಹುಡುಗನ ತಾಯಿ, ಆಸ್ತಿ ಏಜೆಂಟ್‌ನ್ನು ಸಂಪರ್ಕಿಸಿ ಒಪ್ಪಂದವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಅದಕ್ಕೆ ಏಜೆಂಟ್ ನಿರಾಕರಿಸಿದಾಗ, ಪೋಷಕರು ಕಾನೂನು ಮಾರ್ಗ‌ ಹಿಡಿದರು.

Advertisement. Scroll to continue reading.

ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ಹುಡುಗನ ನಡೆಗೆ ಅಚ್ಚರಿ ವ್ಯಕ್ತಪಡಿಸಿತ್ತು. ಈ ಒಪ್ಪಂದವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಅಲ್ಲದೇ, ಆಸ್ತಿಯ ಮಾಲೀಕತ್ವವನ್ನು ಹುಡುಗನಿಗೇ ನೀಡಿದೆ.

Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...