Connect with us

Hi, what are you looking for?

ಅಂತಾರಾಷ್ಟ್ರೀಯ

ಮಾಂತ್ರಿಕನೊಂದಿಗೆ ಮದುವೆ ದಿನಾಂಕ ಘೋಷಿಸಿದ ನಾರ್ವೆಯ ರಾಜಕುಮಾರಿ

1

ಓಸ್ಲೋ: ಕಿಂಗ್ ಹರಾಲ್ಡ್ ಹಾಗೂ ರಾಣಿ ಸೋಂಜಾ ಅವರ ಹಿರಿಯ ಪುತ್ರಿ ನಾರ್ವೆಯ ರಾಜಕುಮಾರಿ ಮಾರ್ಥಾ ಲೂಯಿಸ್ ಮುಂದಿನ ವರ್ಷ ಆಗಸ್ಟ್ 31ರಂದು ಮದುವೆಯಾಗುವುದಾಗಿ ಘೋಷಿಸಿದ್ದಾರೆ. ಅದರಲ್ಲೇನು ವಿಶೇಷ ಅಂತೀರಾ…ವಿಸಾಏಷ ಇದೆ…ಅದೂ ಅವರು ವಿವಾಹವಾಗಲು ಹೊರಟಿರೋದು ಮಾಂತ್ರಿಕನನ್ನು…ಹೌದು, ರಾಜಕುಮಾರಿ, ಮಾಂತ್ರಿಕ ಶಾಮನ್ ಡ್ಯುರೆಕ್ ವೆರೆಟ್ ಅವರನ್ನು ಮದುವೆಯಾಗುವುದಾಗಿ ಘೋಷಿಸಿದ್ದಾರೆ.

51 ವರ್ಷದ ರಾಜಕುಮಾರಿ ಮಾಂತ್ರಿಕ, ಅಮೆರಿಕದ ಖ್ಯಾತ ಚಿಂತಕ, ಪ್ರಕೃತಿ ಚಿಕಿತ್ಸಕನಾದ ಡ್ಯುರೆಕ್ ವೆರೆಟ್ ಅವರೊಂದಿಗೆ 2022ರ ಜೂನ್‌ನಲ್ಲಿ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು. ಈ ಮೂಲಕ ಭಾರೀ ಸುದ್ದಿಯಲ್ಲಿದ್ದರು. ಏಕೆಂದರೆ ಡ್ಯುರೆಕ್‌ನನ್ನು ವಂಚಕ, ಹಣಕ್ಕಾಗಿ ರಾಜಕುಮಾರಿಯನ್ನು ಬಳಸಿಕೊಳ್ಳುತ್ತಿರುವುದಾಗಿ ಸ್ಥಳೀಯವಾಗಿ ವೀಡಿಯೋಗಳು ಹರಿದಾಡಿದ್ದವು.

ಈ ಹಿನ್ನೆಲೆ ಮಾರ್ಥಾ ಲೂಯಿಸ್ ಡ್ಯುರೆಕ್ ವೆರೆಟ್ ಅವರನ್ನು ಮದುವೆಯಾಗಲು ಅಧಿಕೃತ ರಾಜಮನೆತನದ ಯಾವುದೇ ಕರ್ತವ್ಯ ಹಾಗೂ ಸ್ಥಾನಮಾನಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದರು. ತನ್ನ ರಾಜಮನೆತನದ ಬಿರುದನ್ನು ಬಳಸುವುದಿಲ್ಲ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಥವಾ ಯಾವುದೇ ವಾಣಿಜ್ಯ ಸಂಸ್ಥೆಯಲ್ಲಿ ರಾಯಲ್ ಪದವನ್ನು ಬಳಸುವುದಿಲ್ಲ ಎಂದಿದ್ದರು.

ಇದೀಗ ಜೋಡಿ ತಮ್ಮ ಮದುವೆಯ ದಿನಾಂಕವನ್ನು ಘೋಷಿಸಿಕೊಂಡಿದ್ದಾರೆ. ಮಾತ್ರವಲ್ಲದೇ 1968ರಲ್ಲಿ ಸಾಮಾನ್ಯ ಮಹಿಳೆಯಾಗಿದ್ದ ಸೋಂಜಾ ಅವರನ್ನು ವಿವಾಹವಾಗಿದ್ದ ಕಿಂಗ್ ಹರಾಲ್ಡ್ ಅವರ ಆಶೀರ್ವಾದವನ್ನೂ ಜೋಡಿ ಪಡೆದುಕೊಂಡಿದೆ. 

Advertisement. Scroll to continue reading.

ನೈಋತ್ಯ ನಾರ್ವೆಯಲ್ಲಿ ಮದುವೆ :

ಬುಧವಾರ ಪ್ರತ್ಯೇಕ ಹೇಳಿಕೆಯಲ್ಲಿ ರಾಜ, ರಾಣಿ, ಹಾಗೂ ಕ್ರೌನ್ ಪ್ರಿನ್ಸ್ ಹಾಕಾನ್ ಜೋಡಿಯನ್ನು ಅಭಿನಂದಿಸಿದ್ದಾರೆ. ಡ್ಯುರೆಕ್ ವೆರೆಟ್ ಅವರನ್ನು ಕುಟುಂಬಕ್ಕೆ ಸ್ವಾಗತಿಸಲು ಸಂತೋಷವಾಗಿದೆ ಎಂದಿದ್ದಾರೆ.

ಇಬ್ಬರ ಮದುವೆ ನೈಋತ್ಯ ನಾರ್ವೆಯಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿ ಗುರುತಿಸಲಾದ ಫ್ಜೋರ್ಡ್ ತೀರದಲ್ಲಿರುವ ಗೈರಾಂಜರ್ ಪಟ್ಟಣದಲ್ಲಿ ನಡೆಯಲಿದೆ.

ರಾಜಕುಮಾರಿಗಿದು ಎರಡನೇ ಮದುವೆ :

ರಾಜಕುಮಾರಿ ಮಾರ್ಥಾ ಲೂಯಿಸ್ ಈ ಹಿಂದೆ ಖ್ಯಾತ ಬರಹಗಾರ ಅರಿ ಬೆಹ್ನ್ ಅವರನ್ನು ಮದುವೆಯಾಗಿದ್ದರು. ಬಳಿಕ ವಿಚ್ಛೇದಿತರಾಗಿ 3 ವರ್ಷಗಳ ಬಳಿಕ 2019ರಲ್ಲಿ ಬೆಹ್ನ್ ಆತ್ಮಹತ್ಯೆಗೆ ಶರಣಾಗಿದ್ದರು. ಮಾರ್ಥಾ ಲೂಯಿಸ್‌ಗೆ ಈಗಾಗಲೇ ಮೂವರು ಮಕ್ಕಳಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...