Connect with us

Hi, what are you looking for?

ಕ್ರೀಡೆ

WATCH VIDEO : W.0.W.W.4.W…  ಒಂದೇ ಓವರ್ ನಲ್ಲಿ 4 ವಿಕೆಟ್ ಪಡೆದು ದಾಖಲೆ ಬರೆದ ಸಿರಾಜ್

1

ಕೊಲಂಬೊ: ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಒಂದೇ ಓವರ್ ನಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಶ್ರೀಲಂಕಾ ತಂಡಕ್ಕೆ ಮಾರಕವಾಗಿ ಪರಿಣಮಿಸಿದರು.

ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಕುಸಲ್ ಪೆರೆರಾ ಅವರನ್ನು ಔಟ್ ಮಾಡುವ ಮೂಲಕ ಜಸ್ಪ್ರೀತ್ ಬುಮ್ರಾ ಶ್ರೀಲಂಕಾಕ್ಕೆ ದೊಡ್ಡ ಹೊಡೆತ ನೀಡಿದರು. ಬಳಿಕ, ಸಿರಾಜ್ ಅವರು ತಮ್ಮ ಮೊದಲ ಓವರ್‌ನಲ್ಲಿ ಮೇಡನ್ ಪಡೆದರು. ನಂತರದ ಓವರ್‌ನಲ್ಲಿ ಅವರು ನಾಲ್ಕು ವಿಕೆಟ್‌ಗಳನ್ನು ಪಡೆಯುವ ಮೂಲಕ ಶ್ರೀಲಂಕಾ ಅಲ್ಪಮೊತ್ತಕ್ಕೆ ಕುಸಿಯುವಂತೆ ಮಾಡಿದ್ದಾರೆ.

Advertisement. Scroll to continue reading.

ಮೊಹಮ್ಮದ್ ಸಿರಾಜ್ ಅವರು ತಮ್ಮ ಎರಡನೇ ಓವರ್‌ನ ಮೊದಲ ಎಸೆತದಲ್ಲಿ ರವೀಂದ್ರ ಜಡೇಜಾಗೆ ಪಾಥುಮ್ ನಿಸ್ಸಾಂಕ ಕ್ಯಾಚ್ ನೀಡಿದರು. ಇದಾದ ಬಳಿಕ ಮೂರನೇ ಎಸೆತದಲ್ಲಿ ಸದಿರಾ ಔಟಾದರು. ಅಸಲಂಕಾ ನಾಲ್ಕನೇ ಎಸೆತದಲ್ಲಿ ಪೆವಿಲಿಯನ್‌ಗೆ ಮರಳಿದರು. ಸಿರಾಜ್ ಹ್ಯಾಟ್ರಿಕ್ ಮಿಸ್ ಆದರೆ ಕೊನೆಯ ಎಸೆತದಲ್ಲಿ ಧನಂಜಯ್‌ ಔಟ್ ಆಗುವ ಮೂಲಕ ನಾಲ್ಕನೇ ವಿಕೆಟ್ ಪಡೆದರು.

ಹೊಸ ದಾಖಲೆ :

ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಫೈನಲ್‌ನಲ್ಲಿ ಮೊಹಮ್ಮದ್ ಸಿರಾಜ್ ಇತಿಹಾಸ ನಿರ್ಮಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದೇ ಓವರ್‌ನಲ್ಲಿ 4 ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಷ್ಯಾಕಪ್ 2023 ರ ಶ್ರೀಲಂಕಾ ವಿರುದ್ಧದ ಫೈನಲ್‌ನಲ್ಲಿ, ಮೊಹಮ್ಮದ್ ಸಿರಾಜ್ ಕೇವಲ 15 ಎಸೆತಗಳಲ್ಲಿ 5 ವಿಕೆಟ್‌ಗಳನ್ನು ಪಡೆದಿರುವುದು ದಾಖಲೆಯಾಗಿದೆ.

ಈ ಮೂಲಕ ಮೊಹಮ್ಮದ್ ಸಿರಾಜ್ ವೇಗವಾಗಿ 50 ವಿಕೆಟ್ ಪಡೆದ ನಾಲ್ಕನೇ ಭಾರತೀಯ ಆಟಗಾರನಾಗಿ ಹೊರಹೊಮ್ಮಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...

Uncategorized

0 ಬ್ರಹ್ಮಾವರ : ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದಿಗ್ರಾಮದ ಬೈದ ಬೆಟ್ಟು ಎಂಬಲ್ಲಿ ನಡೆದಿದೆ. ಚಂದ್ರ(39) ಆತ್ಮಹತ್ಯೆ ಮಾಡಿಕೊಂಡವರು. ಚಂದ್ರ ಕಳೆದ 4 ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದರು....