Connect with us

Hi, what are you looking for?

ಕರಾವಳಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಒಡಿಶಾದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

1

ಬೆಂಗಳೂರು : ಬೈಂದೂರು ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವ ನಿಟ್ಟಿನಲ್ಲಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ಮತ್ತು ತಂಡದ ಎ3 ಆರೋಪಿ ಹಿರೇಹಡಗಲಿಯ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓರಿಸ್ಸಾದಲ್ಲಿ ಬಂಧಿಸಿದ್ದಾರೆ.

ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ವಂಚನೆ ಮಾಡಲಾದ 5 ಕೋಟಿ ರೂ. ಹಣದಲ್ಲಿ 1.5 ಕೋಟಿ ರೂ. ಹಣವನ್ನು ಈ ಅಭಿನವ ಹಾಲಶ್ರೀ ಸ್ವಾಮೀಜಿ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಈ ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement. Scroll to continue reading.

ಅವರನ್ನು ಕೋರ್ಟ್‌ ನಿರ್ದೇಶದನದ ಮೇರೆಗೆ ವಿಚಾರಣೆ ಮಾಡಲಾಗುತ್ತದೆ. ಆದರೆ, ಪೊಲೀಸರ ಬಂಧನದಿಂದ ತಪ್ಪಿಸಿಕೊಂಡಿದ್ದ ಅಭಿನವ ಸ್ವಾಮೀಜಿ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಜಾಮೀನಿಗಾಗಿ ನ್ಯಾಯಾಲಯ ಮೊರೆ ಹೋಗಿದ್ದರು. ಆದರೆ, ಬೇಲ್ ನೀಡಲು ಕೋರ್ಟ್‌ ನಿರಾಕರಣೆ ಮಾಡಿತ್ತು.

ಇದಾದ ನಂತರ ಮೈಸೂರು, ಬೆಂಗಳೂರು, ವಿಜಯನಗರ ಜಿಲ್ಲೆಯ ಹಡಗಲಿ ಸೇರಿದಂತೆ ಎಲ್ಲೆಡೆ ಸ್ವಾಮೀಜಿಗಾಗಿ ಸಿಸಿಬಿ ಪೊಲೀಸರು ಶೋಧನೆ ಮಾಡಿದ್ದರು. 

ಸಿನಿಮೀಯ ಶೈಲಿಯಲ್ಲಿ ಬಂಧನ: 

ಇನ್ನು ಸ್ವಾಮೀಜಿ ಕರ್ನಾಟಕದ ಮೈಸೂರಿಗೆ ಹೋಗಿ, ಅಲ್ಲಿಂದ ಕಾರಿನಲ್ಲಿ ಆಂಧ್ರಪ್ರದೇಶಕ್ಕೆ ತೆರಳಿದ್ದರು. ಅಲ್ಲಿನ ಹೈದರಾಬಾದ್‌ ವಿಮಾನ ನಿಲ್ದಾಣದಿಂದ ಓಡಿಶಾದ ಕಟಕ್‌ಗೆ ತೆರಳಿದ್ದರು. ಸ್ವಾಮೀಜಿ ಟೀಶರ್ಟ್‌ ಧರಿಸಿ ಸಾಮಾನ್ಯ ವ್ಯಕ್ತಿಯಂತೆ ರೈಲಿನಲ್ಲಿ ಬೇರೊಬ್ಬನ ಜೊತೆಗೆ ಪ್ರಯಾಣ ಮಾಡುತ್ತಿದ್ದರು. ಒಡಿಶಾದ ಪೊಲೀಸರ ಸಹಾಯದಿಂದ ಕರ್ನಾಟಕದ ಸಿಸಿಬಿ ಪೊಲೀಸರು ಸ್ವಾಮೀಜಿಯನ್ನು ಸಿನಿಮೀಯ ಶೈಲಿಯಲ್ಲಿ ಓಡಿಸಿಕೊಂಡು ಹೋಗಿ ಬಂಧಿಸಿದ್ದಾರೆ. ಇನ್ನು ಒಡಿಶಾದ ಕಟಕ್‌ನಿಂದ ಈಶಾನ್ಯ ರಾಜ್ಯಗಳಿಗೆ ಹೋಗುವ ರೈಲಿನಲ್ಲಿ ಸ್ವಾಮೀಜಿ ಬಂಧನವಾಗಿದ್ದು, ಮಧ್ಯಾಹ್ನ 1.30ರ ವಿಮಾನದಲ್ಲಿ ಬೆಂಗಳೂರಿಗೆ ಕರೆತರಲಿದ್ದಾರೆ.

Advertisement. Scroll to continue reading.

ಮೊದಲೇ ದೂರು ನೀಡಿದ್ದ ಅಭಿನವ ಸ್ವಾಮೀಜಿ: 

ಉಡುಪಿಯಲ್ಲಿ ವಂಚನೆಗೊಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ದೂರು ನೀಡುವ ಮೊದಲೇ, ಅಭಿನವ ಹಾಲಶ್ರೀ ಸ್ವಾಮೀಜಿ ಬೆಂಗಳೂರಿನಲ್ಲಿ ದೂರು ದಾಖಲಿಸಿದ್ದರು.  ರಾಜರಾಜೇಶ್ವರಿ ನಗರ ಸಮೀಪದ ಕೆಂಚೇನಹಳ್ಳಿಯ ಪ್ರೀಮಿಯರ್‌ ಟೆಂಪಲ್ ಬೆಲ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ಹಾಲಶ್ರೀ ನೆಲೆಸಿದ್ದರು. ಜು.11ರಂದು ಆರ್‌.ಆರ್‌.ನಗರ ಠಾಣೆಗೆ ತೆರಳಿದ ಸ್ವಾಮೀಜಿ, ತಮ್ಮ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ಇಲ್ಲಸಲ್ಲದ ಆರೋಪ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನಲ್ಲಿ ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿಯ ಕಾಂಗ್ರೆಸ್ ಪಕ್ಷದ ಸೇವಾ ದಳ (ಸಾಮಾಜಿಕ ಜಾಲತಾಣ)ದ ಸಂಚಾಲಕ ಹರ್ಷ ಮೆಂಡನ್‌, ದಿನೇಶ್ ನಾಯ್ಕ್ ಹಳ್ಳಿಹೊಳಿ ಹಾಗೂ ಗೋವಿಂದ ಪೂಜಾರಿ ಅವರ ಹೆಸರು ಉಲ್ಲೇಖಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಹಾಲಶ್ರೀ ಒತ್ತಾಯಿಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...