ಉಡುಪಿ : ಮಣಿಪಾಲ ಪರಿಸರದಲ್ಲಿ ಆಗುತ್ತಿರುವ ಗೋಕಳ್ಳತನಕ್ಕೆ ಕ್ರಮ ಕೈಗೊಳ್ಳುವಂತೆ ಹಾಗೂ ಎಂಡ್ ಪಾಯಿಂಟ್ ನಲ್ಲಿ ಸಾರ್ವಜನಿಕರಿಗೆ ಪ್ರವೇಶ ಮಾಡಿ ಕೊಡುವ ಬಗ್ಗೆ ಬಿಜೆಪಿ ಕಾರ್ಯಕರ್ತರು ಶಾಸಕ ರಘುಪತಿ ಭಟ್ ರಿಗೆ ಮನವಿ ಸಲ್ಲಿಸಲಾಯಿತು. ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭೆ ಸದಸ್ಯೆ ವಿಜಯಲಕ್ಷ್ಮಿ, ವಾರ್ಡ್ ಅಧ್ಯಕ್ಷರಾದ ನಿತ್ಯಾನಂದ, ಯುವ ಮೋರ್ಚಾ ಕಾರ್ಯದರ್ಶಿ ಸಂದೇಶ್ ಪ್ರಭು ಹಾಗೂ ಶಕ್ತಿ ಕೇಂದ್ರದ ಯುವ ಮೋರ್ಚಾ ಉಪ ಅಧ್ಯಕ್ಷರಾದ ನಿತೀನ್ ಪೈ, ಪ್ರಧಾನ ಕಾರ್ಯದರ್ಶಿ ನಿಖಿಲ್ ಮಡಿವಾಳ್ ಮೊದಲಾದವರು ಉಪಸ್ಥಿತರಿದ್ದರು.