ಬೆಳಗಾವಿ : ಸಿಎಂ ಲಾಕ್ ಡೌನ್ ಘೋಷಣೆ ಮಾಡಿದ ನಂತರವು ವಿಟಿಯು ಪರೀಕ್ಷೆಗಳನ್ನು ನಡೆಸಿಯೇ ನಡೆಸುತ್ತೇವೆ ಎಂದು ಯುನಿವರ್ಸಿಟಿ ಸುತ್ತೋಲೆ ಹೊರಡಿಸಿತು. ಪರೀಕ್ಷೆ ಮುಂದೂಡಬೇಕೆಂದು ಆಗ್ರಹಿಸಿ, ವಿಟಿಯುನ ಬಸ್ ಗಳನ್ನು ತಡೆದು ಲಾಕ್ ಡೌನ್ ಕಾರಣ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಎಬಿವಿಪಿ ಪ್ರತಿಭಟನೆ ನಡೆಸಲಾಯಿತು. ಉನ್ನತ ಶಿಕ್ಷಣ ಸಚಿವರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಲಾಯಿತು. ನಂತರದಲ್ಲಿ ವಿಟಿಯು ಪರೀಕ್ಷೆಗಳನ್ನು ಮುಂದೂಡಿ ಸುತ್ತೋಲೆಯನ್ನು ಹೊರಡಿಸಿದೆ. ಎಬಿವಿಪಿ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಎಬಿವಿಪಿ ತಿಳಿಸಿದೆ.