Connect with us

Hi, what are you looking for?

Diksoochi News

Uncategorized

ಸೌಕೂರು ಏತ ನೀರಾವರಿ ಪೈಪ್‍ಲೈನ್ ಲೇಯಿಂಗ್ ಕಾಮಗಾರಿ – ವಾಹನ ಸಂಚಾರ ಸ್ಥಗಿತ

0

ಉಡುಪಿ : ಸೌಕೂರು ಏತ ನೀರಾವರಿ ಕಾಮಗಾರಿಯಲ್ಲಿ ಪೈಪ್‍ಲೈನ್ ಲೇಯಿಂಗ್ ಕಾಮಗಾರಿಯನ್ನು ಕೈಗೊಳ್ಳಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989 ರ ಕಲಂ 221(ಎ)(2) & (5) ರನ್ವಯ ಕುಂದಾಪುರ ತಾಲೂಕಿನ ಮಾವಿನಕಟ್ಟೆ ಸರ್ಕಲ್‍ನಿಂದ ನೇರಳಕಟ್ಟೆ ಸರ್ಕಲ್‍ವರೆಗೆ ಮೇ 1 ರಿಂದ ಮೇ 11 ರ ವರೆಗೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ, ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ವಾಹನಗಳ ಪರ್ಯಾಯ ಮಾರ್ಗ: ಅಂಪಾರು-ನೇರಳಕಟ್ಟೆ-ನೆಂಪು-ಹೆಮ್ಮಾಡಿ ಮಾರ್ಗವಾಗಿ ಹಾಗೂ ಕಂಡ್ಲೂರು-ಗುಲ್ವಾಡಿ-ಮಾವಿನಕಟ್ಟೆ-ಹಟ್ಟಿಯಂಗಡಿ-ತಲ್ಲೂರು-ಹೆಮ್ಮಾಡಿ ಮಾರ್ಗವಾಗಿ ತಲುಪುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!