ಚಂದನವನ : ಕೊರೋನಾ ಮಹಾಮಾರಿ ಸ್ಯಾಂಡಲ್ ವುಡ್ ಗೂ ಮಹಾಮಾರಿಯಾಗಿ ಕಾಡಿದೆ. ಚಂದನವನದ ಅನೇಕರು ಈಗಾಗಲೇ ಕೊರೋನಾದಿಂದ ನಿಧನರಾಗಿದ್ದಾರೆ. ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ರೇಣುಕಾ ಶರ್ಮಾ ಕೊರೋನಾದಿಂದ ನಿನ್ನೆ ತಡರಾತ್ರಿ ವಿಧಿವಶರಾಗಿದ್ದಾರೆ.
ಮೂಲತಃ ಮೈಸೂರಿನ ಟಿ.ನರಸೀಪುರದವರಾದ ರೇಣುಕಾ ಶರ್ಮಾ 1960 ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಸರ್ವಜ್ಞ ಮೂರ್ತಿ ಎಂಬ ಚಿತ್ರಕ್ಕೆ ಸಹಾಯಕನಾಗಿ ದುಡಿದರು. 1980 ರಲ್ಲಿ ಅನುಪಮಾ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದರು. ತೆಲುಗು, ತಮಿಳಿನಲ್ಲಿಯೂ ಕೆಲಸ ಮಾಡಿರುವ ಅವರು ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿ, ಹಠಮಾರಿ ಹೆಣ್ಣು ಕಿಲಾಡಿ ಗಂಡು, ಕೊಲ್ಲೂರು ಶ್ರೀಮೂಕಾಂಬಿಕಾ, ಮಹಾಸಾಧ್ವಿ ಮಲ್ಲಮ್ಮ ಚಿತ್ರವನ್ನು ನಿರ್ದೇಶಿಸಿದ್ದಾರೆ.
Advertisement. Scroll to continue reading.
In this article:anjada gandu, Diksoochi news, diksoochi Tv, diksoochi udupi, kavirathna kalidasa, Renuka Sharma
Click to comment